ರಾಜ್ಯ

2028ರ ಹೊತ್ತಿಗೆ ದೇಶ ಹಾಗೂ ರಾಜ್ಯ ಏಡ್ಸ್‌ ಮುಕ್ತವಾಗಲಿ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2028ರ ಹೊತ್ತಿಗೆ ಭಾರತದ ದೇಶ, ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ, ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ ಎಂದರು.

ಇತ್ತಿಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು ಎಂದು ತಿಳಿಸಿದರು.

ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3 ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂದು ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಸಾಧ್ಯ. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದರು.

ಸಮಾರಂಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

andolanait

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

12 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

19 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

19 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

19 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

19 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

22 hours ago