ರಾಜ್ಯ

2028ರ ಹೊತ್ತಿಗೆ ದೇಶ ಹಾಗೂ ರಾಜ್ಯ ಏಡ್ಸ್‌ ಮುಕ್ತವಾಗಲಿ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2028ರ ಹೊತ್ತಿಗೆ ಭಾರತದ ದೇಶ, ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ, ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ ಎಂದರು.

ಇತ್ತಿಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು ಎಂದು ತಿಳಿಸಿದರು.

ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3 ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂದು ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಸಾಧ್ಯ. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದರು.

ಸಮಾರಂಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

andolanait

Recent Posts

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

2 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

2 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

3 hours ago

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…

4 hours ago

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

7 hours ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

7 hours ago