ರಾಜ್ಯ

2028ರ ಹೊತ್ತಿಗೆ ದೇಶ ಹಾಗೂ ರಾಜ್ಯ ಏಡ್ಸ್‌ ಮುಕ್ತವಾಗಲಿ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2028ರ ಹೊತ್ತಿಗೆ ಭಾರತದ ದೇಶ, ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ, ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ ಎಂದರು.

ಇತ್ತಿಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು ಎಂದು ತಿಳಿಸಿದರು.

ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3 ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂದು ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಸಾಧ್ಯ. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದರು.

ಸಮಾರಂಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

6 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

8 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

10 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

10 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

11 hours ago