ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಈ ಕುರಿತು ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ಯಾರಂಟಿಯ ಮುಖವಾಡ ಧರಿಸಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದರು. ಈ ಉಪ ಚುನಾವಣೆಗಳು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ- ಇವೆರಡರ ಪೈಕಿ ಯಾವ ಕ್ಷೇತ್ರ ಉಳಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಅವರ ಸಚಿವಸಂಪುಟದ ಸದಸ್ಯರು ಗಲಿಬಿಲಿಗೊಂಡಿದ್ದಾರೆ ಎಂದು ವಿಶ್ಲೇಷಿಸಿದರು.
ದಾವಣಗೆರೆಯಲ್ಲಿನ ಮತದಾರರ ಆಕ್ರೋಶವು ಮುಂದಿನ ದಿನಗಳಲ್ಲಿ ರಾಜಕೀಯ ಯಾವ ನಿಟ್ಟಿನಲ್ಲಿ ಸಾಗಲಿದೆ ಎಂಬುದನ್ನು ತೋರಿಸಿಕೊಡುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಇದು ಬಿಜೆಪಿಗೆ ವರದಾನ ಆಗಲಿದೆ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಬಗ್ಗೆ ಮೊಸಳೆಕಣ್ಣೀರು ಹಾಕುವುದು ಅಲ್ಪಸಂಖ್ಯಾತರಿಗೂ ಅರಿವಾಗಿದೆ ಎಂದು ತಿಳಿಸಿದರು.
17 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಸಿದ್ದರಾಮಯ್ಯನವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಾನಾ ಕಾರಣಕ್ಕೆ ಸುದ್ದಿ ಮಾಡಿದೆ. ಮುಖ್ಯಮಂತ್ರಿಗಳ ನಿದ್ದೆಗೆಡಿಸುವ ಕೆಲಸವನ್ನೂ ಈ ಚುನಾವಣೆಗಳು ಮಾಡಿವೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಇದ್ದರೂ ತನ್ನ ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದೆ ಎಂದು ಆಕ್ಷೇಪಿಸಿದರು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…