ರಾಜ್ಯ

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಈ ಕುರಿತು ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ಯಾರಂಟಿಯ ಮುಖವಾಡ ಧರಿಸಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದರು. ಈ ಉಪ ಚುನಾವಣೆಗಳು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ- ಇವೆರಡರ ಪೈಕಿ ಯಾವ ಕ್ಷೇತ್ರ ಉಳಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಅವರ ಸಚಿವಸಂಪುಟದ ಸದಸ್ಯರು ಗಲಿಬಿಲಿಗೊಂಡಿದ್ದಾರೆ ಎಂದು ವಿಶ್ಲೇಷಿಸಿದರು.

ದಾವಣಗೆರೆಯಲ್ಲಿನ ಮತದಾರರ ಆಕ್ರೋಶವು ಮುಂದಿನ ದಿನಗಳಲ್ಲಿ ರಾಜಕೀಯ ಯಾವ ನಿಟ್ಟಿನಲ್ಲಿ ಸಾಗಲಿದೆ ಎಂಬುದನ್ನು ತೋರಿಸಿಕೊಡುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಇದು ಬಿಜೆಪಿಗೆ ವರದಾನ ಆಗಲಿದೆ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಬಗ್ಗೆ ಮೊಸಳೆಕಣ್ಣೀರು ಹಾಕುವುದು ಅಲ್ಪಸಂಖ್ಯಾತರಿಗೂ ಅರಿವಾಗಿದೆ ಎಂದು ತಿಳಿಸಿದರು.

17 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಸಿದ್ದರಾಮಯ್ಯನವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಾನಾ ಕಾರಣಕ್ಕೆ ಸುದ್ದಿ ಮಾಡಿದೆ. ಮುಖ್ಯಮಂತ್ರಿಗಳ ನಿದ್ದೆಗೆಡಿಸುವ ಕೆಲಸವನ್ನೂ ಈ ಚುನಾವಣೆಗಳು ಮಾಡಿವೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಇದ್ದರೂ ತನ್ನ ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದೆ ಎಂದು ಆಕ್ಷೇಪಿಸಿದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago