ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವೂ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ(ಅ.15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ, ಎರಡು ರಾಜ್ಯಗಳ ವಿಧಾನಸಭೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ.
ಈ ವೇಳೆ ಕರ್ನಾಟಕ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ(ಹಾವೇರಿ ಜಿಲ್ಲೆ), ಸಂಡೂರು(ಬಳ್ಳಾರಿ ಜಿಲ್ಲೆ) ಹಾಗೂ ಚನ್ನಪಟ್ಟಣ(ರಾಮನಗರ ಜಿಲ್ಲೆ) ಕ್ಷೇತ್ರಗಳಿಗೆ ನವೆಂಬರ್ 13 ರಂದು ಚುನಾವಣೆ ನಡೆಸಲಾಗುವುದು. ಅಂತೆಯೇ ಚುನಾವಣಾ ಮತ ಎಣಿಕೆಯನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳಲ್ಲಿಯೂ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅ.18 ರಂದು ಉಪಚುನಾವಣೆಯ ಅಧಿಸೂಚನೆಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳಿಗೆ ಅಕ್ಟೋಬರ್ 25 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳ ನಾಮಪತ್ರವನ್ನು ಅ.28 ರಂದು ಪರಿಶೀಲನೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯಲು ಅ.30ರಂದು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಯಾಕಾಗಿ ಉಪ ಚುನಾವಣೆ?
ಚನ್ನಪಟ್ಟಣ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆ, ಶಾಸಕ ಸ್ಥಾನ ತೆರವಾಗಿತ್ತು. ಶಿಗ್ಗಾಂವಿಯಲ್ಲಿಯೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಸಂಸದರಾಗಿ ಆಯ್ಕೆಯಾಗಿರುವುದರಿಂದ ಈ ಎರಡೂ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ತೆರವಾಗಿತ್ತು. ಇನ್ನು ಶಾಸಕ ಇ.ತುಕಾರಾಂ ಅವರು ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನೂ ನಡೆಸಲಾಗುತ್ತಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…