ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಕರ್ನಾಟಕ ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟೆಯ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ಏಪ್ರಿಲ್ 9 ರಂದು ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಹಾಗೂ ಶಾಸಕ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಈ ಉಪಚುನಾವಣೆಗಳು ರಾಜಕೀಯವಾಗಿ ಮಹತ್ವದ್ದಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಅಭ್ಯರ್ಥಿ ಆಯ್ಕೆ ಮತ್ತು ತಯಾರಿಯಲ್ಲಿ ತೊಡಗಿವೆ.
ಆಯೋಗವು ಇತರ ರಾಜ್ಯಗಳಲ್ಲಿ (ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್, ತ್ರಿಪುರಾ) ಒಟ್ಟು 8 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದ್ದು, ಎಲ್ಲಾ ಉಪಚುನಾವಣೆಗಳ ಫಲಿತಾಂಶಗಳೂ ಮೇ 4ರಂದು ಪ್ರಕಟವಾಗಲಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…