ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ಪದಾಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಕುರಿತು ಚರ್ಚೆಗಳು ನಡೆದವು.
ಇನ್ನು ಇತ್ತೀಚೆಗೆ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಸರ್ಕಾರ 40 ಸಾವಿರ ಕೋಟಿ ಹಗರಣವನ್ನು ಕೊವಿಡ್ ಸಂದರ್ಭದಲ್ಲಿ ಮಾಡಿತ್ತು ಎಂಬ ಗಂಭೀರ ಆರೋಪವನ್ನು ಮಾಡಿದ್ದರು. ಈ ಹೇಳಿಕೆ ಬಗ್ಗೆ ಸಹ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ ಹೈಕಮಾಂಡ್ ಈ ವಿಷಯವನ್ನು ನೋಡಿಕೊಳ್ಳಲಿದೆ ಎಂದರು. ಅಲ್ಲದೇ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ನೀಡಬಾರದೆಂದು ಪದಾಧಿಕಾರಿಗಳಿಗೆ ಬಿವೈ ರಾಘವೇಂದ್ರ ಸೂಚಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಯಾವೊಬ್ಬ ಪದಾಧಿಕಾರಿ ಸಹ ವಿಶ್ರಮಿಸುವಂತಿಲ್ಲ, ಬೂತ್ ಕಾರ್ಯಕರ್ತರು, ವರಿಷ್ಠರು ಹಾಗೂ ಹಿರಿಯರನ್ನು ಸಮಾನವಾಗಿ ನೋಡಿಕೊಳ್ಳಬೇಕು ಎಂದು ಬಿವೈ ವಿಜಯೇಂದ್ರ ಹೇಳಿದರು.
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…