ಶಿವಮೊಗ್ಗ: ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಬೇಕು ಎಂದು ಕೆ.ಎಸ್. ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.
ಮತ್ತೊಮ್ಮೆ ಮೋದಿ ಎಂಬುದು ನಮ್ಮ ಆಶಯ, ಹೀಗಾಗಿ ಈಶ್ವರಪ್ಪ ಅವರು ಬೆಂಬಲ ನೀಡಿ ರಾಘವೇಂದ್ರನನ್ನು ಗೆಲ್ಲಿಸಬೇಕು. ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ಮೀರಿ ಬಿಜೆಪಿ ಪರ ಒಲವು ಕಾಣುತ್ತಿದೆ. ಮೋದಿ ಜನಪ್ರಿಯತೆ ದಿನೇ ದಿನೆ ಹೆಚ್ಚಾಗುತ್ತಿದ್ದು,ಕಾಂಗ್ರೆಸ್ ಪಕ್ಷವನ್ನ ನಿದ್ದೆಗೆಡಿಸಿದೆ. ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಬರುತ್ತವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಪ್ರಪಂಚದಲ್ಲಿ 8 ನೇ ಅದ್ಬುತವಾಗಲಿದೆ ಎಂದರು.
ಕೇಂದ್ರ ಸರ್ಕಾರದ ಯೋಜನೆ ರಾಜ್ಯದ ಜನರಿಗೆ ಸಿಗಬಾರದು ಎಂದು ರಾಜ್ಯ ಸರ್ಕಾರ ದುರುದ್ದೇಶದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…