ಶಿವಮೊಗ್ಗ: ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಬೇಕು ಎಂದು ಕೆ.ಎಸ್. ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.
ಮತ್ತೊಮ್ಮೆ ಮೋದಿ ಎಂಬುದು ನಮ್ಮ ಆಶಯ, ಹೀಗಾಗಿ ಈಶ್ವರಪ್ಪ ಅವರು ಬೆಂಬಲ ನೀಡಿ ರಾಘವೇಂದ್ರನನ್ನು ಗೆಲ್ಲಿಸಬೇಕು. ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ಮೀರಿ ಬಿಜೆಪಿ ಪರ ಒಲವು ಕಾಣುತ್ತಿದೆ. ಮೋದಿ ಜನಪ್ರಿಯತೆ ದಿನೇ ದಿನೆ ಹೆಚ್ಚಾಗುತ್ತಿದ್ದು,ಕಾಂಗ್ರೆಸ್ ಪಕ್ಷವನ್ನ ನಿದ್ದೆಗೆಡಿಸಿದೆ. ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಬರುತ್ತವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಪ್ರಪಂಚದಲ್ಲಿ 8 ನೇ ಅದ್ಬುತವಾಗಲಿದೆ ಎಂದರು.
ಕೇಂದ್ರ ಸರ್ಕಾರದ ಯೋಜನೆ ರಾಜ್ಯದ ಜನರಿಗೆ ಸಿಗಬಾರದು ಎಂದು ರಾಜ್ಯ ಸರ್ಕಾರ ದುರುದ್ದೇಶದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…