Mysore
28
overcast clouds

Social Media

ಬುಧವಾರ, 08 ಜುಲೈ 2026
Light
Dark

ಮುಡಾ ಹಗರಣವನ್ನು ಸಿಬಿಐಗೆ ವಹಿಸಿ: ಸಿಎಂ ಸಿದ್ದರಾಮಯ್ಯಗೆ ಬಿವೈವಿ ಸವಾಲು

ಬೆಂಗಳೂರು: ಮುಖ್ಯಮಂತ್ರಿಗಳಿಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಗುತ್ತಿರುವ ಮುಡಾ ಹಗರಣ, ವಾಲ್ಮೀಕಿ ಹಗರಣ ಸೇರಿದಂತೆ ಬೆಲೆ ಏರಿಕೆ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಈ ಹಗರಣಗಳಲ್ಲಿ ಸಿಎಂ ಕುಟುಂಬವೇ ಪಾಲುದಾರರಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಾವಿರಾರು ಕೋಟಿ ಬೆಲೆಬಾಳುವ ನಿವೇಶನಗಳಿಗೆ ಸಂಬಂಧಿಸಿದಂತೆ ಮೈಸೂರು ಮುಡಾ ಹಗರಣ ನಡೆದಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ಅವರು, ದಲಿತರು ಸೇರಿದಂತೆ ಎಲ್ಲಾ ಸಮುದಾಯವದರಿಗೂ ಅನ್ಯಾಯ ಮಾಡಿದ್ದಾರೆ. ಎಲ್ಲಾ ಕಡೆ ಹಣ ಲೂಟಿ ಹೊಡೆದು, ಅದೇ ಮೊತ್ತದಲ್ಲಿ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಈ ಹಗರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯ ಮಾಡಿದರು.

ಮುಡಾದಲ್ಲಿ ಯಾವ ಯಾವ ಸರ್ಕಾರದಲ್ಲಿ ಹಗರಣ ನಡೆದಿದ್ದರೂ ಎಲ್ಲವನ್ನು ಸೇರಿಸಿ ಸಿಬಿಐ ತನಿಖೆಗೆ ಒಪ್ಪಿಸಿ. ಸಿಎಂ ಕುಟುಂಬವೇ ಈ ಹಗರಣದಲ್ಲಿ ಭಾಗಿಯಾಗಿದೆ. ನಿಮಗೆ ಬೇಕಾದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿದರೆ ಸಾಕಾಗಲ್ಲ. ಸಿಬಿಐಗೆ ಕೊಡಲೇಬೇಕು ಎಂದು ಆಗ್ರಹಿಸಿದರು.

Tags:
error: Content is protected !!