ಬೆಂಗಳೂರು: ಮುಖ್ಯಮಂತ್ರಿಗಳಿಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಗುತ್ತಿರುವ ಮುಡಾ ಹಗರಣ, ವಾಲ್ಮೀಕಿ ಹಗರಣ ಸೇರಿದಂತೆ ಬೆಲೆ ಏರಿಕೆ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಈ ಹಗರಣಗಳಲ್ಲಿ ಸಿಎಂ ಕುಟುಂಬವೇ ಪಾಲುದಾರರಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಾವಿರಾರು ಕೋಟಿ ಬೆಲೆಬಾಳುವ ನಿವೇಶನಗಳಿಗೆ ಸಂಬಂಧಿಸಿದಂತೆ ಮೈಸೂರು ಮುಡಾ ಹಗರಣ ನಡೆದಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ಅವರು, ದಲಿತರು ಸೇರಿದಂತೆ ಎಲ್ಲಾ ಸಮುದಾಯವದರಿಗೂ ಅನ್ಯಾಯ ಮಾಡಿದ್ದಾರೆ. ಎಲ್ಲಾ ಕಡೆ ಹಣ ಲೂಟಿ ಹೊಡೆದು, ಅದೇ ಮೊತ್ತದಲ್ಲಿ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಈ ಹಗರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯ ಮಾಡಿದರು.
ಮುಡಾದಲ್ಲಿ ಯಾವ ಯಾವ ಸರ್ಕಾರದಲ್ಲಿ ಹಗರಣ ನಡೆದಿದ್ದರೂ ಎಲ್ಲವನ್ನು ಸೇರಿಸಿ ಸಿಬಿಐ ತನಿಖೆಗೆ ಒಪ್ಪಿಸಿ. ಸಿಎಂ ಕುಟುಂಬವೇ ಈ ಹಗರಣದಲ್ಲಿ ಭಾಗಿಯಾಗಿದೆ. ನಿಮಗೆ ಬೇಕಾದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿದರೆ ಸಾಕಾಗಲ್ಲ. ಸಿಬಿಐಗೆ ಕೊಡಲೇಬೇಕು ಎಂದು ಆಗ್ರಹಿಸಿದರು.
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …