ಬೆಂಗಳೂರು: ಕಾಂಗ್ರೆಸ್ ನಾಯಕರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ರಾಜೀನಾಮೆ ಕೇಳಿ ಅವರ ಸಂತೋಷಕ್ಕೆ ಅವರೇ ವಿಘ್ನ ತಂದುಕೊಳ್ಳಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಕ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ ಲೋಕಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾರೆ. ಹೀಗಾಗಿ ಪ್ರಲ್ಹಾದ್ ಜೋಶಿ ಅವರು ರಾಜೀನಾಮೆ ನೀಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಆಗ್ರಹಿಸಿದ್ದರು. ಹೀಗಾಗಿ ದಿನೇಶ್ ಅವರ ವಿರುದ್ಧ ಟ್ವೀಟ್ ಮಾಡಿ ಪೋಸ್ಟ್ ಮಾಡಿದ್ದಾರೆ.
ವಿಜಯೇಂದ್ರ ಅವರ ಟ್ವೀಟ್ನಲ್ಲಿ ಏನಿದೆ?
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ಸಂತೋಷ ಪಡಲು ಹೊರಟಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರು ಅಸಂಬದ್ಧವಾಗಿ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಆರೋಪಿ ಗೋಪಾಲ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮ ಸಂಬಂಧ ಬೆರೆಸದಂತೆ ಪ್ರಲ್ಹಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ. ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.
ಇಷ್ಟಾಗಿಯೂ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ. ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಶಿಯವರ ವಿಚಾರದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ ಎಂದಿದ್ದಾರೆ.
ಪ್ರಲ್ಹಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಮಸಿ ಅಂಟಿಸಿಕೊಂಡವರಲ್ಲ, ಅವರ ಸಾಮರ್ಥ್ಯ ಹಾಗೂ ಅನುಭವವನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಸಹಿಸದ ಕೆಲವು ರಾಜಕೀಯ ಪಟ್ಟಭದ್ರಾ ಹಿತಾಸಕ್ತಿಗಳು ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ ನಡೆಸಿದ್ದಾರೆ. ಆಧಾರರಹಿತ ಆರೋಪಗಳಿಂದ ಭಾರತೀಯ ಜನತಾ ಪಾರ್ಟಿಯ ವರ್ಚಸ್ಸಿಗೆ ಧಕ್ಕೆ ತರಬಹುದು ಎಂದು ಕಾಂಗ್ರೆಸ್ಸಿಗರು ಅಂದುಕೊಂಡಿದ್ದರೆ ಅದು ಕೇವಲ ಅವರ ಭ್ರಮೆ ಅಷ್ಟೇ ಎಂದು ತಿಳಿಸಿದ್ದಾರೆ.
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…