ರಾಜ್ಯ

ಪ್ರಲ್ಹಾದ್‌ ಜೋಶಿ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್‌ ನಾಯಕರ ವಿರುದ್ಧ ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು: ಕಾಂಗ್ರೆಸ್‌ ನಾಯಕರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ರಾಜೀನಾಮೆ ಕೇಳಿ ಅವರ ಸಂತೋಷಕ್ಕೆ ಅವರೇ ವಿಘ್ನ ತಂದುಕೊಳ್ಳಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಕ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ ಲೋಕಸಭಾ ಚುನಾವಣೆ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾರೆ. ಹೀಗಾಗಿ ಪ್ರಲ್ಹಾದ್ ಜೋಶಿ ಅವರು ರಾಜೀನಾಮೆ ನೀಡಬೇಕು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅವರು ಆಗ್ರಹಿಸಿದ್ದರು. ಹೀಗಾಗಿ ದಿನೇಶ್‌ ಅವರ ವಿರುದ್ಧ ಟ್ವೀಟ್‌ ಮಾಡಿ ಪೋಸ್ಟ್‌ ಮಾಡಿದ್ದಾರೆ.‌

ವಿಜಯೇಂದ್ರ ಅವರ ಟ್ವೀಟ್‌ನಲ್ಲಿ ಏನಿದೆ?
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ಸಂತೋಷ ಪಡಲು ಹೊರಟಿದ್ದಾರೆ. ಸಚಿವ ದಿನೇಶ್‌ ಗುಂಡೂರಾವ್‌ ಅವರು ಅಸಂಬದ್ಧವಾಗಿ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಆರೋಪಿ ಗೋಪಾಲ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮ ಸಂಬಂಧ ಬೆರೆಸದಂತೆ ಪ್ರಲ್ಹಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ. ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.

ಇಷ್ಟಾಗಿಯೂ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ. ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಶಿಯವರ ವಿಚಾರದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ ಎಂದಿದ್ದಾರೆ.

ಪ್ರಲ್ಹಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಮಸಿ ಅಂಟಿಸಿಕೊಂಡವರಲ್ಲ‌, ಅವರ ಸಾಮರ್ಥ್ಯ ಹಾಗೂ ಅನುಭವವನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಸಹಿಸದ ಕೆಲವು ರಾಜಕೀಯ ಪಟ್ಟಭದ್ರಾ ಹಿತಾಸಕ್ತಿಗಳು ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ ನಡೆಸಿದ್ದಾರೆ. ಆಧಾರರಹಿತ ಆರೋಪಗಳಿಂದ ಭಾರತೀಯ ಜನತಾ ಪಾರ್ಟಿಯ ವರ್ಚಸ್ಸಿಗೆ ಧಕ್ಕೆ ತರಬಹುದು ಎಂದು ಕಾಂಗ್ರೆಸ್ಸಿಗರು ಅಂದುಕೊಂಡಿದ್ದರೆ ಅದು ಕೇವಲ ಅವರ ಭ್ರಮೆ ಅಷ್ಟೇ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

22 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

22 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

22 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

22 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

23 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

23 hours ago