ಬೆಂಗಳೂರು : ರಾಜ್ಯ ಸರ್ಕಾರ ಜನರ ಸಮಸ್ಯೆಗಳು ಏನು ಎಂಬುವುದನ್ನ ಕೇಳಿ ಕ್ರಮ ಕೈಗೊಳ್ಳುವುದನ್ನ ಬಿಟ್ಟು ಆಂತರಿಕ ಸಂಘರ್ಷದಲ್ಲೇ ತೊಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ.
ನಗರದಲ್ಲಿ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ ಸಚಿವರ ಮೂಲಕ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಎತ್ತಿಸಿದ್ದಾರೆ. ಜನರ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವುದು ಬಿಟ್ಟು ಡಿಕೆಶಿ ಬಲಿ ಕೊಡಲು ಸಚಿವರ ಮೂಲಕ ಡಿಸಿಎಂ ವಿಚಾರ ಎತ್ತಿಸಿದ್ದಾರೆ. ಈಗ ನೋಡಿದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ. ಸಿದ್ದರಾಮಯ್ಯನವರು ಎಷ್ಟು ದಿನ ಸಿಎಂ ಆಗಿರುತ್ತಾರೋ ಗೊತ್ತಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ಜೊತೆಗೆ ಜನರ ಸಮಸ್ಯೆ ಕೇಳಬೇಕಲ್ವಾ? ನಾವು ಇದನ್ನೇ ಕೇಳಿದರೆ ಉಡಾಫೆ ಉತ್ತರ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಸತ್ಯನಾರಾಯಣ ಅವರು ಬಹಳ ಗಂಭೀರವಾದ ಆರೋಪ ಮಾಡಿದ್ದಾರೆ. ಆದರೆ ಇವತ್ತಿನವರೆಗೂ ನಾಗೇಂದ್ರರನ್ನು ಕರೆದು ವಿಚಾರಣೆ ಮಾಡುವ ಧೈರ್ಯವನ್ನು ಎಸ್ಐಟಿ ತೋರಿಸಿಲ್ಲ. ಗುರುವಾರ ನಿನ್ನೆ ಕೋರ್ಟ್ ಕೂಡಾ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ಹೇಳಿದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…