ಬೆಂಗಳೂರು : ರಾಜ್ಯ ಸರ್ಕಾರ ಜನರ ಸಮಸ್ಯೆಗಳು ಏನು ಎಂಬುವುದನ್ನ ಕೇಳಿ ಕ್ರಮ ಕೈಗೊಳ್ಳುವುದನ್ನ ಬಿಟ್ಟು ಆಂತರಿಕ ಸಂಘರ್ಷದಲ್ಲೇ ತೊಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ.
ನಗರದಲ್ಲಿ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ ಸಚಿವರ ಮೂಲಕ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಎತ್ತಿಸಿದ್ದಾರೆ. ಜನರ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವುದು ಬಿಟ್ಟು ಡಿಕೆಶಿ ಬಲಿ ಕೊಡಲು ಸಚಿವರ ಮೂಲಕ ಡಿಸಿಎಂ ವಿಚಾರ ಎತ್ತಿಸಿದ್ದಾರೆ. ಈಗ ನೋಡಿದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ. ಸಿದ್ದರಾಮಯ್ಯನವರು ಎಷ್ಟು ದಿನ ಸಿಎಂ ಆಗಿರುತ್ತಾರೋ ಗೊತ್ತಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ಜೊತೆಗೆ ಜನರ ಸಮಸ್ಯೆ ಕೇಳಬೇಕಲ್ವಾ? ನಾವು ಇದನ್ನೇ ಕೇಳಿದರೆ ಉಡಾಫೆ ಉತ್ತರ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಸತ್ಯನಾರಾಯಣ ಅವರು ಬಹಳ ಗಂಭೀರವಾದ ಆರೋಪ ಮಾಡಿದ್ದಾರೆ. ಆದರೆ ಇವತ್ತಿನವರೆಗೂ ನಾಗೇಂದ್ರರನ್ನು ಕರೆದು ವಿಚಾರಣೆ ಮಾಡುವ ಧೈರ್ಯವನ್ನು ಎಸ್ಐಟಿ ತೋರಿಸಿಲ್ಲ. ಗುರುವಾರ ನಿನ್ನೆ ಕೋರ್ಟ್ ಕೂಡಾ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…