ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಸುತ್ತಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ದಿನಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಹ ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ ೧೪ ಸೈಟ್ ಗಳನ್ನ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.
ಮುಡಾ ಹಗರಣ ಸಂಬಂಧವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ ಬೆಲೆಬಾಳುವ ೧೪ ಜಮೀನುಗಳನ್ನ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿರೋದು ಕೇವಲ ಎರಡು ಜಮೀನು ಮಾತ್ರ. ಇಲ್ಲಿ ನೋಡಿದ್ರೆ ೧೪ ಜಮೀನು ನೀಡಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಅಲ್ಲದೆ ಸಿಎಂ ಪತ್ನಿಗೆ ಮೈಸೂರಿನ ಕೆಸರೇ ಗ್ರಾಮದಲ್ಲಿ ೩.೧೬ ಜಮೀನನ್ನು ಹೊಂದಿದ್ದರು. ಈ ಜಮೀನನ್ನು ೨೦೧೪ ರಲ್ಲಿ ಮುಡಾ ಬಳಸಿಕೊಂಡಿದೆ ಎಂದು ಪಾರ್ವತಿ ಮುಡಾಗೆ ದೂರು ನೀಡಿದ್ದರು. ಈ ಬಗ್ಗೆ ೨೦೧೭ ರಲ್ಲಿ ತನಿಖೆ ಮಾಡಿ ಪರಿಹಾರದ ಭೂಮಿಯನ್ನ ನೀಡಲು ನಿರ್ಧರಿಸಲಾಯಿತು. ೨೦೨೧ ರಲ್ಲಿ ಪ್ರತಿ ಚದರ ಅಡಿಗೆ ೯ ಸಾವಿರ ರೂಪಾಯಿ ಬೆಲೆ ಬಾಳುವ ೧೪ ನಿವೇಶಮ ಅರ್ಹತೆಗೂ ಮೀರಿ ನೀಡಲಾಗಿದೆ. ಇದೇ ವರ್ಷ ಏಪ್ರಿಲ್ ೧೫ ರಂದು ಓರ್ವ ವ್ಯಕ್ತಿಗೆನೇ ೪೨ ನಿವೇಶ ನೀಡಿದ್ದಾರೆ. ಈ ಸರ್ಕಾರ ಬಂದ ಮೇಲೆ ಸಾವಿರಾರು ನಿವೇಶನಗಳನ್ನ ಅಕ್ರಮವಾಗಿ ನೀಡಿದ್ದಾರೆ. ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ ಈಗ ಸಿದ್ದರಾಮಯ್ಯ ಅವರು ಪರಿಹಾರ ಕೇಳುತ್ತಿದ್ದಾರೆ. ಪ್ರಕರದ ಬಗ್ಗೆ ಸಿಎಂ ತಪ್ಪು ಮಾಹಿತಿ ನೀಡಲು ಯತ್ನಿಸುತ್ತಿದ್ದಾರೆ. ಇದರಿಂದ ಅವರ ಮುಖವಾಡ ಕಳಚಿ ಬಿದ್ದಿದೆ ಪ್ರತಿಹಂತದಲ್ಲೂ ಹಗರಣದ ವಾಸನೆ ಹೊರಬರುತ್ತಿದೆ ಎಂದರು
ಅಲ್ಲದೆ ಯಾರ ಅವಧಿಯಲ್ಲಿ ಅಕ್ರಮವಾಗಿದ್ದರೂ ಕೂಡ ಅಕ್ರಮ ಅಕ್ರಮನೇ. ಇದರ ಬಗ್ಗೆ ಸಂಪೂರ್ಣವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…