ರಾಜ್ಯ

ಸಿಎಂ ಪತ್ನಿಗೆ ಅರ್ಹತೆಗೂ ಮೀರಿ ೧೪ ಜಮೀನುಗಳು ಹಂಚಿಕೆ ಮಾಡಿದ್ದಾರೆ ; ಬಿವೈ ವಿಜಯೇಂದ್ರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ  ದಿನೇ ದಿನೇ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಸುತ್ತಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ದಿನಕ್ಕೊಂದು ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಹ ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ ೧೪ ಸೈಟ್‌ ಗಳನ್ನ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.

ಮುಡಾ ಹಗರಣ ಸಂಬಂಧವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ ಬೆಲೆಬಾಳುವ ೧೪ ಜಮೀನುಗಳನ್ನ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿರೋದು ಕೇವಲ ಎರಡು ಜಮೀನು ಮಾತ್ರ. ಇಲ್ಲಿ ನೋಡಿದ್ರೆ ೧೪ ಜಮೀನು ನೀಡಿದ್ದಾರೆ ಎಂದು ವಿಜಯೇಂದ್ರ  ಆರೋಪಿಸಿದ್ದಾರೆ.

ಅಲ್ಲದೆ ಸಿಎಂ ಪತ್ನಿಗೆ ಮೈಸೂರಿನ ಕೆಸರೇ ಗ್ರಾಮದಲ್ಲಿ ೩.೧೬ ಜಮೀನನ್ನು ಹೊಂದಿದ್ದರು. ಈ ಜಮೀನನ್ನು ೨೦೧೪ ರಲ್ಲಿ ಮುಡಾ ಬಳಸಿಕೊಂಡಿದೆ ಎಂದು ಪಾರ್ವತಿ ಮುಡಾಗೆ ದೂರು ನೀಡಿದ್ದರು. ಈ ಬಗ್ಗೆ ೨೦೧೭ ರಲ್ಲಿ ತನಿಖೆ ಮಾಡಿ ಪರಿಹಾರದ ಭೂಮಿಯನ್ನ ನೀಡಲು ನಿರ್ಧರಿಸಲಾಯಿತು. ೨೦೨೧ ರಲ್ಲಿ ಪ್ರತಿ ಚದರ ಅಡಿಗೆ ೯ ಸಾವಿರ ರೂಪಾಯಿ ಬೆಲೆ ಬಾಳುವ ೧೪ ನಿವೇಶಮ ಅರ್ಹತೆಗೂ ಮೀರಿ ನೀಡಲಾಗಿದೆ. ಇದೇ ವರ್ಷ ಏಪ್ರಿಲ್‌ ೧೫ ರಂದು ಓರ್ವ ವ್ಯಕ್ತಿಗೆನೇ ೪೨ ನಿವೇಶ ನೀಡಿದ್ದಾರೆ. ಈ ಸರ್ಕಾರ ಬಂದ ಮೇಲೆ ಸಾವಿರಾರು ನಿವೇಶನಗಳನ್ನ ಅಕ್ರಮವಾಗಿ ನೀಡಿದ್ದಾರೆ. ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ ಈಗ ಸಿದ್ದರಾಮಯ್ಯ ಅವರು ಪರಿಹಾರ ಕೇಳುತ್ತಿದ್ದಾರೆ. ಪ್ರಕರದ ಬಗ್ಗೆ ಸಿಎಂ ತಪ್ಪು ಮಾಹಿತಿ ನೀಡಲು ಯತ್ನಿಸುತ್ತಿದ್ದಾರೆ. ಇದರಿಂದ ಅವರ ಮುಖವಾಡ ಕಳಚಿ ಬಿದ್ದಿದೆ ಪ್ರತಿಹಂತದಲ್ಲೂ ಹಗರಣದ ವಾಸನೆ ಹೊರಬರುತ್ತಿದೆ ಎಂದರು

ಅಲ್ಲದೆ ಯಾರ ಅವಧಿಯಲ್ಲಿ ಅಕ್ರಮವಾಗಿದ್ದರೂ ಕೂಡ ಅಕ್ರಮ ಅಕ್ರಮನೇ. ಇದರ ಬಗ್ಗೆ ಸಂಪೂರ್ಣವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

21 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

45 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago