ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಸುತ್ತಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ದಿನಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಹ ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ ೧೪ ಸೈಟ್ ಗಳನ್ನ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.
ಮುಡಾ ಹಗರಣ ಸಂಬಂಧವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ ಬೆಲೆಬಾಳುವ ೧೪ ಜಮೀನುಗಳನ್ನ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿರೋದು ಕೇವಲ ಎರಡು ಜಮೀನು ಮಾತ್ರ. ಇಲ್ಲಿ ನೋಡಿದ್ರೆ ೧೪ ಜಮೀನು ನೀಡಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಅಲ್ಲದೆ ಸಿಎಂ ಪತ್ನಿಗೆ ಮೈಸೂರಿನ ಕೆಸರೇ ಗ್ರಾಮದಲ್ಲಿ ೩.೧೬ ಜಮೀನನ್ನು ಹೊಂದಿದ್ದರು. ಈ ಜಮೀನನ್ನು ೨೦೧೪ ರಲ್ಲಿ ಮುಡಾ ಬಳಸಿಕೊಂಡಿದೆ ಎಂದು ಪಾರ್ವತಿ ಮುಡಾಗೆ ದೂರು ನೀಡಿದ್ದರು. ಈ ಬಗ್ಗೆ ೨೦೧೭ ರಲ್ಲಿ ತನಿಖೆ ಮಾಡಿ ಪರಿಹಾರದ ಭೂಮಿಯನ್ನ ನೀಡಲು ನಿರ್ಧರಿಸಲಾಯಿತು. ೨೦೨೧ ರಲ್ಲಿ ಪ್ರತಿ ಚದರ ಅಡಿಗೆ ೯ ಸಾವಿರ ರೂಪಾಯಿ ಬೆಲೆ ಬಾಳುವ ೧೪ ನಿವೇಶಮ ಅರ್ಹತೆಗೂ ಮೀರಿ ನೀಡಲಾಗಿದೆ. ಇದೇ ವರ್ಷ ಏಪ್ರಿಲ್ ೧೫ ರಂದು ಓರ್ವ ವ್ಯಕ್ತಿಗೆನೇ ೪೨ ನಿವೇಶ ನೀಡಿದ್ದಾರೆ. ಈ ಸರ್ಕಾರ ಬಂದ ಮೇಲೆ ಸಾವಿರಾರು ನಿವೇಶನಗಳನ್ನ ಅಕ್ರಮವಾಗಿ ನೀಡಿದ್ದಾರೆ. ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ ಈಗ ಸಿದ್ದರಾಮಯ್ಯ ಅವರು ಪರಿಹಾರ ಕೇಳುತ್ತಿದ್ದಾರೆ. ಪ್ರಕರದ ಬಗ್ಗೆ ಸಿಎಂ ತಪ್ಪು ಮಾಹಿತಿ ನೀಡಲು ಯತ್ನಿಸುತ್ತಿದ್ದಾರೆ. ಇದರಿಂದ ಅವರ ಮುಖವಾಡ ಕಳಚಿ ಬಿದ್ದಿದೆ ಪ್ರತಿಹಂತದಲ್ಲೂ ಹಗರಣದ ವಾಸನೆ ಹೊರಬರುತ್ತಿದೆ ಎಂದರು
ಅಲ್ಲದೆ ಯಾರ ಅವಧಿಯಲ್ಲಿ ಅಕ್ರಮವಾಗಿದ್ದರೂ ಕೂಡ ಅಕ್ರಮ ಅಕ್ರಮನೇ. ಇದರ ಬಗ್ಗೆ ಸಂಪೂರ್ಣವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…