ರಾಜ್ಯ

ಸಿಎಂ ಪತ್ನಿಗೆ ಅರ್ಹತೆಗೂ ಮೀರಿ ೧೪ ಜಮೀನುಗಳು ಹಂಚಿಕೆ ಮಾಡಿದ್ದಾರೆ ; ಬಿವೈ ವಿಜಯೇಂದ್ರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ  ದಿನೇ ದಿನೇ ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಸುತ್ತಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ದಿನಕ್ಕೊಂದು ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಹ ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ ೧೪ ಸೈಟ್‌ ಗಳನ್ನ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.

ಮುಡಾ ಹಗರಣ ಸಂಬಂಧವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ ಬೆಲೆಬಾಳುವ ೧೪ ಜಮೀನುಗಳನ್ನ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿರೋದು ಕೇವಲ ಎರಡು ಜಮೀನು ಮಾತ್ರ. ಇಲ್ಲಿ ನೋಡಿದ್ರೆ ೧೪ ಜಮೀನು ನೀಡಿದ್ದಾರೆ ಎಂದು ವಿಜಯೇಂದ್ರ  ಆರೋಪಿಸಿದ್ದಾರೆ.

ಅಲ್ಲದೆ ಸಿಎಂ ಪತ್ನಿಗೆ ಮೈಸೂರಿನ ಕೆಸರೇ ಗ್ರಾಮದಲ್ಲಿ ೩.೧೬ ಜಮೀನನ್ನು ಹೊಂದಿದ್ದರು. ಈ ಜಮೀನನ್ನು ೨೦೧೪ ರಲ್ಲಿ ಮುಡಾ ಬಳಸಿಕೊಂಡಿದೆ ಎಂದು ಪಾರ್ವತಿ ಮುಡಾಗೆ ದೂರು ನೀಡಿದ್ದರು. ಈ ಬಗ್ಗೆ ೨೦೧೭ ರಲ್ಲಿ ತನಿಖೆ ಮಾಡಿ ಪರಿಹಾರದ ಭೂಮಿಯನ್ನ ನೀಡಲು ನಿರ್ಧರಿಸಲಾಯಿತು. ೨೦೨೧ ರಲ್ಲಿ ಪ್ರತಿ ಚದರ ಅಡಿಗೆ ೯ ಸಾವಿರ ರೂಪಾಯಿ ಬೆಲೆ ಬಾಳುವ ೧೪ ನಿವೇಶಮ ಅರ್ಹತೆಗೂ ಮೀರಿ ನೀಡಲಾಗಿದೆ. ಇದೇ ವರ್ಷ ಏಪ್ರಿಲ್‌ ೧೫ ರಂದು ಓರ್ವ ವ್ಯಕ್ತಿಗೆನೇ ೪೨ ನಿವೇಶ ನೀಡಿದ್ದಾರೆ. ಈ ಸರ್ಕಾರ ಬಂದ ಮೇಲೆ ಸಾವಿರಾರು ನಿವೇಶನಗಳನ್ನ ಅಕ್ರಮವಾಗಿ ನೀಡಿದ್ದಾರೆ. ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ ಈಗ ಸಿದ್ದರಾಮಯ್ಯ ಅವರು ಪರಿಹಾರ ಕೇಳುತ್ತಿದ್ದಾರೆ. ಪ್ರಕರದ ಬಗ್ಗೆ ಸಿಎಂ ತಪ್ಪು ಮಾಹಿತಿ ನೀಡಲು ಯತ್ನಿಸುತ್ತಿದ್ದಾರೆ. ಇದರಿಂದ ಅವರ ಮುಖವಾಡ ಕಳಚಿ ಬಿದ್ದಿದೆ ಪ್ರತಿಹಂತದಲ್ಲೂ ಹಗರಣದ ವಾಸನೆ ಹೊರಬರುತ್ತಿದೆ ಎಂದರು

ಅಲ್ಲದೆ ಯಾರ ಅವಧಿಯಲ್ಲಿ ಅಕ್ರಮವಾಗಿದ್ದರೂ ಕೂಡ ಅಕ್ರಮ ಅಕ್ರಮನೇ. ಇದರ ಬಗ್ಗೆ ಸಂಪೂರ್ಣವಾಗಿ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

2 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

5 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

6 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

7 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

8 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

10 hours ago