ರಾಜ್ಯ

ದುಬಾರಿ ಜೀವನ- ಅಭಿವೃದ್ಧಿ ಶೂನ್ಯ: ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬೊಗಳೆ ಬಿಡುವ ಭರವಸೆಗಳು, ಖಜಾನೆ ಬರಿದು ಮಾಡುವ ಜಾಹೀರಾತುಗಳು. ಕೊಟ್ಟಿದ್ದು ತಲುಪುತ್ತಿಲ್ಲ, ಬಚ್ಚಿಟ್ಟಿದ್ದು ಇನ್ನೂ ಪತ್ತೆಯಾಗಿಲ್ಲ, ಕೊಳ್ಳೆಯೊಡೆಯುವುದು ಕೊನೆಯಾಗುತ್ತಿಲ್ಲ. ದುಬಾರಿ ಜೀವನ-ಅಭಿವೃದ್ಧಿ ಶೂನ್ಯ ಆಡಳಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹೆಜ್ಜೆ ಇಡದ ಎರಡು ವರ್ಷ ಬೆಲೆ ಏರಿಕೆ-ಭ್ರಷ್ಟತೆಯ ಕರಾಳ ಸ್ಪರ್ಶ. ಇದುವೇ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ 2 ವರ್ಷಗಳ ಲೂಟಿ ಸಾಧನೆಗಳು ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಸರ್ಕಾರದ ವೈಫಲ್ಯಗಳ ಪಟ್ಟಿ ಮಾಡಿರುವ ವಿಜಯೇಂದ್ರ ಅವರು ಕಾಂಗ್ರೆಸ್ ನಿರಂತರವಾಗಿ ಲೂಟಿ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಮಿತಿಮೀರಿದ ಭ್ರಷ್ಟಾಚಾರ, ನಿರಂತರ ಬೆಲೆ ಏರಿಕೆ, ಏರುತ್ತಿರುವ ರೈತರ ಆತ್ಮಹತ್ಯೆಗಳು, ಸರಣೀ ಬಾಣಂತಿಯರ ಸಾವುಗಳು, ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳು, ನಿರಂತರ ಬೆದರಿಕೆಯಲ್ಲಿರುವ ಹಿಂದೂಗಳ ಜೀವನ, ಮೂಲಸೌಕರ್ಯಭಿವೃದ್ಧಿ ಮೂಲೆಗುಂಪು, ಓಲೈಕೆ ರಾಜಕಾರಣಕ್ಕಾಗಿ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಬೆಂಬಲ, ನಿರುದ್ಯೋಗದ ತಾಂಡವ, ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳು ಮತ್ತು ಆಶ್ವಾಸನೆಗಳು ಸಂಪೂರ್ಣ ವಿಫಲ, ಸ್ಥಗಿತಗೊಂಡ ಅಭಿವೃದ್ಧಿ, ಪ್ರಧಾನ ಮಂತ್ರಿ-ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ ಮತ್ತು ಇತರ ರೈತ ಕಲ್ಯಾಣ ಯೋಜನೆಗಳ ರದ್ದು, ಬ್ರ್ಯಾಂಡ್ ಬೆಂಗಳೂರು ಬ್ಯಾಡ್ ಬೆಂಗಳೂರಾಯಿತು, ಗ್ರೇಟರ್ ಬೆಂಗಳೂರು ವಾಟರ್ ಬೆಂಗಳೂರು, ವಾರಂಟಿಯಿಲ್ಲದ ಗ್ಯಾರಂಟಿಗಳು, 2.5 ಲಕ್ಷ ಕೋಟಿ ರೂ ಸಾಲವೇ ಸಾಧನೆ ಎಂದು ಪೋಸ್ಟ್‌ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

7 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

11 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

12 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

12 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

12 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago