Mysore
26
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ಜಾತಿಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

b y vijayendra caste census

ದಾವಣಗೆರೆ: ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದು, ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ನ್ಯಾಯ ಸಿಗಬೇಕು. ಈ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಆದರೆ ಸಿಎಂಗೆ ತಮ್ಮ ಕುರ್ಚಿ ಬಗ್ಗೆ ಯಾವಾಗ ಅಭದ್ರತೆ ಕಾಡುತ್ತದೋ ಆಗ ಈ ಜಾತಿ ಗಣತಿ ವಿಚಾರ ಕೈಗೆತ್ತಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಜಾತಿ ಜನಗಣತಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿರುವವರು ಸಿಎಂ ಸಿದ್ದರಾಮಯ್ಯ. ಅವರು ಸ್ಪಷ್ಟ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Tags:
error: Content is protected !!