ರಾಜ್ಯ

ಪಕ್ಷ ವಿರೋಧಿ ಕೆಲಸ ಮಾಡಿದ್ದೇ ಉಚ್ಛಾಟನೆಗೆ ಕಾರಣ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶಾಸಕರಾದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದ ಆರೋಪದಡಿ ಶಾಸಕರಾದ ಶಿವರಾಮ್‌ ಹೆಬ್ಬಾರ್‌ ಹಾಗೂ ಎಸ್.ಟಿ.ಸೋಮಶೇಖರ್‌ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ಇದನ್ನೂ ಓದಿ:- ಮುತ್ತು ರತ್ನಗಳನ್ನೆಲ್ಲಾ ನೀವೇ ಇಟ್ಟುಕೊಳ್ಳಿ: ಬಿಜೆಪಿ ಶಾಸಕರ ಉಚ್ಛಾಟನೆಗೆ ಡಿಕೆಶಿ ಟಾಂಗ್‌

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಪಕ್ಷ ವಿರೋಧಿ ಕೆಲಸ ಮಾಡಿದ್ದ ಪರಿಣಾಮ ಅವರಿಬ್ಬರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಅವರಿಬ್ಬರೂ ಚೆನ್ನಾಗಿ ಅಧಿಕಾರಿ ಅನುಭವಿಸಿದ್ರು. ಈಗ ವಿಪಕ್ಷದಲ್ಲಿ ಕೂರಲು ಕಷ್ಟ ಆಯ್ತು ಅನ್ಸುತ್ತೆ. ಹಾಗಾಗಿ ಪಕ್ಷದ ವಿರುದ್ಧ ದಿನೇ ದಿನೇ ಇಲ್ಲಸಲ್ಲದ ಆರೋಪ ಮಾಡುತ್ತಾ, ಕಾಂಗ್ರೆಸ್‌ ನಾಯಕರ ಜೊತೆ ಗುರುತಿಸಿಕೊಂಡಿದ್ದರು. ಹೀಗಾಗಿ ಹೈಕಮಾಂಡ್‌ ಸರಿಯಾದ ತೀರ್ಮಾನ ಕೈಗೊಂಡಿದೆ ಎಂದರು.

ಇನ್ನು ಬಿಜೆಪಿ ಶಾಸಕರ ಉಚ್ಛಾಟನೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪಕ್ಷದ ತೀರ್ಮಾನಕ್ಕೆ ಡಿಕೆಶಿ ಅವರು ನೋವು ಪಡುವ ಅಗತ್ಯವಿಲ್ಲ. ಅವರಿಬ್ಬರು ಪಕ್ಷ ವಿರೋಧಿ ಕೆಲಸ ಮಾಡಿದ್ದ ಬಗ್ಗೆ ಡಿಕೆಶಿಗೂ ಗೊತ್ತು ಎಂದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

10 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

11 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

11 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

12 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

12 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

13 hours ago