ರಾಜ್ಯ

ಪಕ್ಷ ವಿರೋಧಿ ಕೆಲಸ ಮಾಡಿದ್ದೇ ಉಚ್ಛಾಟನೆಗೆ ಕಾರಣ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶಾಸಕರಾದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದ ಆರೋಪದಡಿ ಶಾಸಕರಾದ ಶಿವರಾಮ್‌ ಹೆಬ್ಬಾರ್‌ ಹಾಗೂ ಎಸ್.ಟಿ.ಸೋಮಶೇಖರ್‌ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ಇದನ್ನೂ ಓದಿ:- ಮುತ್ತು ರತ್ನಗಳನ್ನೆಲ್ಲಾ ನೀವೇ ಇಟ್ಟುಕೊಳ್ಳಿ: ಬಿಜೆಪಿ ಶಾಸಕರ ಉಚ್ಛಾಟನೆಗೆ ಡಿಕೆಶಿ ಟಾಂಗ್‌

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಪಕ್ಷ ವಿರೋಧಿ ಕೆಲಸ ಮಾಡಿದ್ದ ಪರಿಣಾಮ ಅವರಿಬ್ಬರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಅವರಿಬ್ಬರೂ ಚೆನ್ನಾಗಿ ಅಧಿಕಾರಿ ಅನುಭವಿಸಿದ್ರು. ಈಗ ವಿಪಕ್ಷದಲ್ಲಿ ಕೂರಲು ಕಷ್ಟ ಆಯ್ತು ಅನ್ಸುತ್ತೆ. ಹಾಗಾಗಿ ಪಕ್ಷದ ವಿರುದ್ಧ ದಿನೇ ದಿನೇ ಇಲ್ಲಸಲ್ಲದ ಆರೋಪ ಮಾಡುತ್ತಾ, ಕಾಂಗ್ರೆಸ್‌ ನಾಯಕರ ಜೊತೆ ಗುರುತಿಸಿಕೊಂಡಿದ್ದರು. ಹೀಗಾಗಿ ಹೈಕಮಾಂಡ್‌ ಸರಿಯಾದ ತೀರ್ಮಾನ ಕೈಗೊಂಡಿದೆ ಎಂದರು.

ಇನ್ನು ಬಿಜೆಪಿ ಶಾಸಕರ ಉಚ್ಛಾಟನೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪಕ್ಷದ ತೀರ್ಮಾನಕ್ಕೆ ಡಿಕೆಶಿ ಅವರು ನೋವು ಪಡುವ ಅಗತ್ಯವಿಲ್ಲ. ಅವರಿಬ್ಬರು ಪಕ್ಷ ವಿರೋಧಿ ಕೆಲಸ ಮಾಡಿದ್ದ ಬಗ್ಗೆ ಡಿಕೆಶಿಗೂ ಗೊತ್ತು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

17 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

17 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

17 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

17 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

17 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago