ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಜಾತಿ ಗಣತಿ ವರದಿಯೂ ಬೆದರು ಬೊಂಬೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.
ಉತ್ತರ ಕನ್ನಡದಲ್ಲಿ ಇಂದು(ಏಪ್ರಿಲ್.11) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ವರದಿ ಮಂಡನೆ ಮಾಡಲಾಗಿರುವ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ತಮ್ಮ ಸಿಎಂ ಕುರ್ಚಿ ಅಲುಗಾಡಿದಾಗ ಸರ್ಕಾರದ ದುರಾಡಳಿತ ಬೆಲೆ ಏರಿಕೆ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತದೆ. ಅದನ್ನು ಮುಚ್ಚಿಕೊಳ್ಳಲು ಜಾತಿ ಗಣತಿ ವರದಿ ಮಂಡನೆಗೆ ಮುಂದಾಗುತ್ತಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಪ್ರತಿನಿತ್ಯ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಸರ್ಕಾರದ ಈ ತೀರ್ಮಾನದಿಂದ ಜನತೆ ಸಂಕಷ್ಟಕ್ಕೀಡಾಗಿದ್ದು, ರಾಜ್ಯದ ಜನತೆ ಬೇಸತ್ತಿದ್ದಾರೆ. ಅಲ್ಲದೇ ಜನಾಕ್ರೋಶ ಯಾತ್ರೆಯ ಬಿಸಿ ಕಾಂಗ್ರೆಸ್ಗೂ ತಟ್ಟಿದೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಏಪ್ರಿಲ್. 17 ರಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಕರೆ ನೀಡಿದ್ದಾರೆ. ಇದು ಅವರ ಹತಾಶ ಮನೋಭಾವ ತೋರಿಸಿದೆ ಎಂದು ವಾಗ್ದಾಳಿ ನಡೆಸಿದರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…