ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಜಾತಿ ಗಣತಿ ವರದಿಯೂ ಬೆದರು ಬೊಂಬೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.
ಉತ್ತರ ಕನ್ನಡದಲ್ಲಿ ಇಂದು(ಏಪ್ರಿಲ್.11) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ವರದಿ ಮಂಡನೆ ಮಾಡಲಾಗಿರುವ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ತಮ್ಮ ಸಿಎಂ ಕುರ್ಚಿ ಅಲುಗಾಡಿದಾಗ ಸರ್ಕಾರದ ದುರಾಡಳಿತ ಬೆಲೆ ಏರಿಕೆ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತದೆ. ಅದನ್ನು ಮುಚ್ಚಿಕೊಳ್ಳಲು ಜಾತಿ ಗಣತಿ ವರದಿ ಮಂಡನೆಗೆ ಮುಂದಾಗುತ್ತಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಪ್ರತಿನಿತ್ಯ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಸರ್ಕಾರದ ಈ ತೀರ್ಮಾನದಿಂದ ಜನತೆ ಸಂಕಷ್ಟಕ್ಕೀಡಾಗಿದ್ದು, ರಾಜ್ಯದ ಜನತೆ ಬೇಸತ್ತಿದ್ದಾರೆ. ಅಲ್ಲದೇ ಜನಾಕ್ರೋಶ ಯಾತ್ರೆಯ ಬಿಸಿ ಕಾಂಗ್ರೆಸ್ಗೂ ತಟ್ಟಿದೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಏಪ್ರಿಲ್. 17 ರಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಕರೆ ನೀಡಿದ್ದಾರೆ. ಇದು ಅವರ ಹತಾಶ ಮನೋಭಾವ ತೋರಿಸಿದೆ ಎಂದು ವಾಗ್ದಾಳಿ ನಡೆಸಿದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…