ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಜಾತಿ ಗಣತಿ ವರದಿಯೂ ಬೆದರು ಬೊಂಬೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.
ಉತ್ತರ ಕನ್ನಡದಲ್ಲಿ ಇಂದು(ಏಪ್ರಿಲ್.11) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ವರದಿ ಮಂಡನೆ ಮಾಡಲಾಗಿರುವ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ತಮ್ಮ ಸಿಎಂ ಕುರ್ಚಿ ಅಲುಗಾಡಿದಾಗ ಸರ್ಕಾರದ ದುರಾಡಳಿತ ಬೆಲೆ ಏರಿಕೆ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತದೆ. ಅದನ್ನು ಮುಚ್ಚಿಕೊಳ್ಳಲು ಜಾತಿ ಗಣತಿ ವರದಿ ಮಂಡನೆಗೆ ಮುಂದಾಗುತ್ತಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಪ್ರತಿನಿತ್ಯ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಸರ್ಕಾರದ ಈ ತೀರ್ಮಾನದಿಂದ ಜನತೆ ಸಂಕಷ್ಟಕ್ಕೀಡಾಗಿದ್ದು, ರಾಜ್ಯದ ಜನತೆ ಬೇಸತ್ತಿದ್ದಾರೆ. ಅಲ್ಲದೇ ಜನಾಕ್ರೋಶ ಯಾತ್ರೆಯ ಬಿಸಿ ಕಾಂಗ್ರೆಸ್ಗೂ ತಟ್ಟಿದೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಏಪ್ರಿಲ್. 17 ರಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಕರೆ ನೀಡಿದ್ದಾರೆ. ಇದು ಅವರ ಹತಾಶ ಮನೋಭಾವ ತೋರಿಸಿದೆ ಎಂದು ವಾಗ್ದಾಳಿ ನಡೆಸಿದರು.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…