Categories: ರಾಜ್ಯ

ಉಪಚುನಾವಣೆ ಸೋಲು: ಕಾರ್ಯಕರ್ತರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಸೋಲು ಕಂಡ ಬೆನ್ನಲ್ಲೇ ಪಕ್ಷದ ಕಾರ್ಯಕರ್ತರಿಗೆ ಪತ್ರದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧೈರ್ಯ ತುಂಬಿದ್ದಾರೆ.

ಈ ಕುರಿತು ಇಂದು(ನ.26) ತಮ್ಮ ಎಕ್ಸ್‌ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ ಅವರು, ಉಪಚುನಾವಣೆ ಫಲಿತಾಂಶಗಳು ಪಕ್ಷ ಸಂಘಟನೆಯ ಸಾಮರ್ಥ್ಯ ಹಾಗೂ ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಪತ್ರದಲ್ಲಿ ಏನಿದೆ?

ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಎರಡು ಕ್ಷೇತ್ರಗಳಲ್ಲಿ, ಮಿತ್ರ ಪಕ್ಷವಾದ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಪರಾಜಯಗೊಂಡಿರುವ ಕಾರಣ ನಾವ್ಯಾರೂ ಎದೆಗುಂದಬೇಕಿಲ್ಲ. ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸ್‌ನ ಅಧಿಕಾರ ದುರುಪಯೋಗ ಹಾಗೂ ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ ಎಂಬುದು ನಿಸ್ಸಂಶಯವಾಗಿದೆ. ಆದರೂ ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ. ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತವೂ ಆಗಿದೆ ಎಂದು ಭಾವಿಸೋಣ ಎಂದಿದ್ದಾರೆ.

ಭಾರತೀಯ ಜನತಾ ಪಾರ್ಟಿ ಅಧಿಕಾರದ ಬೆನ್ನು ಹತ್ತಿ ರಾಜಕಾರಣ ಮಾಡುವುದಕ್ಕಾಗಿ ಜನ್ಮ ತಾಳಿದ್ದಲ್ಲ. ಬದಲಾಗಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷವಾಗಿದೆ. ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಳವಣಿಗೆಯ ಪ್ರತಿ ಹಂತವೂ ಚಾರಿತ್ರಿಕ ದಾಖಲೆಯಾಗಿದ್ದು, ಪಕ್ಷದ ಕಾರ್ಯಕರ್ತರಾಗಿ ನಾವೆಲ್ಲರೂ ಹೆಮ್ಮೆಪಡುವ ನಿಟ್ಟಿನಲ್ಲಿ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಹೆಬ್ಬಾಗಿಲು ತೆರೆದು ಕೊಟ್ಟ ರಾಜ್ಯ ‘ಕರ್ನಾಟಕ’ಎಂಬ ಹೆಗ್ಗಳಿಕೆ ನಮ್ಮದಾಗಿದೆ ಎಂದು ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಅಭಿವೃದ್ಧಿ ಶೂನ್ಯ ಆಡಳಿತದೊಂದಿಗೆ ಹತ್ತು ಹಲವು ಹಗರಣಗಳಲ್ಲಿ ಸಿಲುಕಿಕೊಂಡು ರಾಜ್ಯದ ಗೌರವ ಹಾಗೂ ಘನತೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಕುಗ್ಗುವಂತಾಗಲು ಕಾರಣವಾಗಿದೆ. ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಬ್ಯಾಂಕಿನ ಖಾತೆಗೆ ಖನ್ನ ಹಾಕಿ ಲಪಟಾಯಿಸಿದ ಪ್ರಕರಣವೂ ದೇಶದ ಇತಿಹಾಸದಲ್ಲಿಯೇ ಮೊದಲನೇಯದಾಗಿದೆ. ಅಲ್ಲದೇ ವಕ್ಸ್ ಕಾಯ್ದೆ ಹೆಸರಿನಲ್ಲಿ ರೈತರು, ಮಠಮಾನ್ಯಗಳು ಹಾಗೂ ದೇವಸ್ಥಾನಗಳ ಆಸ್ತಿ ಆಕ್ರಮಿಸಲು ಕಠೋರ ನಿಲುವಿನ ಅಸ್ತ್ರ ಬಳಸಿದ್ದು ಇದೇ ಮೊದಲು ಎಂದು ಹೇಳಿದರೆ ತಪ್ಪಾಗಲಾರದು. ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿ ಕಡು ಬಡವರ ಅನ್ನದ ತಟ್ಟೆಯನ್ನು ನಿರ್ದಯವಾಗಿ ಈ ಸರ್ಕಾರ ಕಿತ್ತುಕೊಳ್ಳಲು ಹೊರಟಿದ್ದೇಕೆ ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ತಪ್ಪೇ ಮಾಡದಿದ್ದರೆ, ಅಕ್ರಮವಾಗಿ ನಿವೇಶನಗಳನ್ನು ಪಡೆಯದಿದ್ದರೆ 14 ನಿವೇಶನಗಳನ್ನು ಮುಡಾಗೆ ಒಪ್ಪಿಸಿದ್ದಾದರೂ ಏಕೆ? ಎಂಬ ಪ್ರಶ್ನೆಗಳು ಇಂದಿಗೂ ಜೀವಂತ. ಕಾನೂನು ವ್ಯವಸ್ಥೆಯಲ್ಲಿ ಇದು ತಾರ್ಕಿಕ ಅಂತ್ಯ ಕಾಣುವವರೆಗೂ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಕೆಲವು ಮಂತ್ರಿಗಳು ಪ್ರಾಮಾಣಿಕತೆಯ ಮಾತನಾಡುವ ನೈತಿಕತೆ ಹೊಂದಲು ಸಾಧ್ಯವೇ ಇಲ್ಲ. ಹಣ ಬಲ, ಅಧಿಕಾರ ಬಲದ ಜೊತೆಗೆ ಚುನಾವಣೆಯ ಹಿಂದಿನ ದಿನವನ್ನು ಗುರಿಯನ್ನಾಗಿಸಿಕೊಂಡು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತದಾರರ ಖಾತೆಗೆ ಹಾಕಿದ್ದು ಚುನಾವಣೆಯ ಅನೈತಿಕತೆಯಲ್ಲದೇ ಮತ್ತಿನ್ನೇನು? ದುರ್ಮಾರ್ಗಗಳನ್ನು ಬಳಸಿ ಉಪಚುನಾವಣೆಯನ್ನು ಗೆಲ್ಲುವುದು ಆಡಳಿತ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ಸಿಗೆ ಹೊಸತೇನೂ ಅಲ್ಲ, ಈ ನಿಟ್ಟಿನಲ್ಲಿ ಈ ಚುನಾವಣೆಯ ಅಪಜಯವನ್ನು ನಾವ್ಯಾರೂ ಹಿನ್ನೆಡೆ ಎಂದು ಪರಿಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago