ಹುಬ್ಬಳ್ಳಿ: ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಉಪಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಮಗನ ಸೋಲಿನ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ನಮಗೆ ಗೆಲ್ಲುವ ಎಲ್ಲಾ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ನವರು ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಗೆದ್ದ ಯಾಸಿರ್ ಖಾನ್ ಪಠಾಣ್ಗೆ ಅಭಿನಂದನೆಗಳು. ಚುನಾವಣೆ ಸಂಧರ್ಭದಲ್ಲಿ ಅಲಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ನವರು ಗೆಲುವು ಸಾಧಿಸಿದ್ದಾರೆ. ಸರ್ಕಾರದ ಅವರದ್ದೇ ಇದೆ. ಆಡಳಿತ ಪಕ್ಷ ಎಂದು ಕಾಂಗ್ರೆಸ್ ಶಾಸಕರರನ್ನು ಆಯ್ಕೆ ಮಾಡಿದ್ದಾರೆ ಎಂದು ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಶಿಗ್ಗಾಂವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ನಾವು ಅಭಿವೃದ್ಧಿ ಜೊತೆಗೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲಿ ಎಂದು ಆಶಿಸುತ್ತೇನೆ ಎಂದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…