ಹುಬ್ಬಳ್ಳಿ: ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಉಪಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಮಗನ ಸೋಲಿನ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ನಮಗೆ ಗೆಲ್ಲುವ ಎಲ್ಲಾ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ನವರು ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಗೆದ್ದ ಯಾಸಿರ್ ಖಾನ್ ಪಠಾಣ್ಗೆ ಅಭಿನಂದನೆಗಳು. ಚುನಾವಣೆ ಸಂಧರ್ಭದಲ್ಲಿ ಅಲಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ನವರು ಗೆಲುವು ಸಾಧಿಸಿದ್ದಾರೆ. ಸರ್ಕಾರದ ಅವರದ್ದೇ ಇದೆ. ಆಡಳಿತ ಪಕ್ಷ ಎಂದು ಕಾಂಗ್ರೆಸ್ ಶಾಸಕರರನ್ನು ಆಯ್ಕೆ ಮಾಡಿದ್ದಾರೆ ಎಂದು ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಶಿಗ್ಗಾಂವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ನಾವು ಅಭಿವೃದ್ಧಿ ಜೊತೆಗೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲಿ ಎಂದು ಆಶಿಸುತ್ತೇನೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…