ಹುಬ್ಬಳ್ಳಿ: ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಉಪಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಮಗನ ಸೋಲಿನ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ನಮಗೆ ಗೆಲ್ಲುವ ಎಲ್ಲಾ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ನವರು ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಗೆದ್ದ ಯಾಸಿರ್ ಖಾನ್ ಪಠಾಣ್ಗೆ ಅಭಿನಂದನೆಗಳು. ಚುನಾವಣೆ ಸಂಧರ್ಭದಲ್ಲಿ ಅಲಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ನವರು ಗೆಲುವು ಸಾಧಿಸಿದ್ದಾರೆ. ಸರ್ಕಾರದ ಅವರದ್ದೇ ಇದೆ. ಆಡಳಿತ ಪಕ್ಷ ಎಂದು ಕಾಂಗ್ರೆಸ್ ಶಾಸಕರರನ್ನು ಆಯ್ಕೆ ಮಾಡಿದ್ದಾರೆ ಎಂದು ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಶಿಗ್ಗಾಂವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ನಾವು ಅಭಿವೃದ್ಧಿ ಜೊತೆಗೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲಿ ಎಂದು ಆಶಿಸುತ್ತೇನೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…