ಬೆಂಗಳೂರು: ವಿಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಜನತಾ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದೆ ಎಂದು ಸಚಿವ ಭೈರತಿ ಸುರೇಶ್ ಉಪಚುನಾವಣೆ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಉಪಚುನಾವಣೆ ಗೆಲುವಿನ ಬಗ್ಗೆ ಮಾಧ್ಯಮದವರೊಂದಿಗೆ ಸಂತಸ ವ್ಯಕ್ತಪಡಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು, ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಪದೇ ಪದೇ ಆಪಾದನೆ ಮಾಡುತ್ತಿದ್ದರು. ಈಗ ಜನತಾ ನ್ಯಾಯಾಲಯ ಒಳ್ಳೆಯ ತೀರ್ಪನ್ನೇ ನೀಡಿದೆ ಎಂದು ವಿಪಕ್ಷಗಳಿಗೆ ತಿರುಗೇಟು ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನ್ಯಾಯಯುತವಾಗಿ ಸೈಟ್ ತೆಗೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿಯವರ ಆರೋಪಗಳೆಲ್ಲಾ ಸುಳ್ಳು ಎಂದು ಜನರೆಲ್ಲಾ ಚುನಾವಣೆಯಲ್ಲಿ ತೀರ್ಪು ನೀಡಿದ್ದಾರೆ ಎಂದರು.
ಈ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಆಶೀರ್ವಾದ ಮಾಡಿದವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…