ರಾಜ್ಯ

ಸಂವಿಧಾನವನ್ನು ಜೀವನದ ಧ್ಯೇಯವಾಗಿಸಿಕೊಂಡು ಸಿಎಂ ಸಿದ್ದರಾಮಯ್ಯ ಆಡಳಿತ ನಿರ್ವಹಣೆ: ಬೈರತಿ ಸುರೇಶ್‌

ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು, ಸಂವಿಧಾನವನ್ನು ತಮ್ಮ ಜೀವನದ ಧ್ಯೇಯವಾಗಿಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಸಚಿವ ಬೈರತಿ ಸುರೇಶ್‌ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಇಂದು(ಜನವರಿ.12) ದೇವದುರ್ಗ ತಿಂಥಣಿ ಬ್ರಿಡ್ಜ್‌ ವತಿಯಿಂದ ಆಯೋಜಿಸಲಾಗಿದ್ದ ಕನಕಗುರು ಪೀಠದ ಹಾಲುಮತ ಸಂಸ್ಕೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಯಾರೂ ಏನೂ ಮಾಡಲು ಆಗುವುದಿಲ್ಲ. ರಾಜ್ಯದಲ್ಲಿ ಶೇ.60 ರಿಂದ 90ರಷ್ಟು ಜನ ಸಿದ್ದರಾಮಯ್ಯ ಅವರೊಂದಿಗೆ ಇದ್ದಾರೆ. ಅಲ್ಲದೇ ಕುರುಬ ಸಮುದಾಯ, ದಲಿತ ವರ್ಗ, ಮೇಲ್ವರ್ಗ ಹಾಗೂ ಬಡವರೆಲ್ಲರೂ ಸಿದ್ದರಾಮಯ್ಯ ಅವರಿಗೆ ಮತಗಳನ್ನು ಬೆಂಬಲಿಸಿದ್ದೀರಿ. ಹೀಗಾಗಿ ಅವರೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಿರ್ವಹಿಸುತ್ತಿದ್ದು, ಯಾರು ಸಹ ಆಂತಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ನಮ್ಮ ಹೈಕಮಾಂಡ್‌, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಹಾಗೂ ಸುರ್ಜೇವಾಲಾ ಎಲ್ಲರೂ ಸಹ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಇದ್ದಾರೆ. ಅಲ್ಲದೇ ರಾಜ್ಯದ ಜನತೆಯೇ ಆರ್ಶೀವಾದ ಅವರ ಮೇಲಿದೆ. ಹೀಗಾಗಿ ಬಿಜೆಪಿ-ಜೆಡಿಎಸ್‌ ಪಕ್ಷಗಳು ಮಾಡುವ ಇಲ್ಲಸಲ್ಲದ ಆರೋಪಗಳಿಗೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ಕನಕದಾಸ ಅವರು ಬರೆದಿರುವ ಕುಲಕುಲವೆಂದು ಹೊಡೆದಾಡದಿರಿ ಕುಲದ ಮೂಲವನ್ನೇನಾದರೂ ಬಲ್ಲೀರಾ ಎಂಬ ವಚನವನ್ನು ನೆನಪಿಸಿದರು.

ನನಗೆ ಶಾಸಕರು, ಸಚಿವರ ಬೆಂಬಲ ಹೇಳಿಕೆ ವಿಚಾರ

ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವೈಯಕ್ತಿಕ ಹೇಳಿಕೆಯನ್ನು ತಿಳಿಸಿದ್ದಾರೆ. ಅದರಲ್ಲಿ ಯಾವ ತಪ್ಪು ಇಲ್ಲ, ಎಲ್ಲರಿಗೂ ವೈಯಕ್ತಿಕ ನಿರ್ಧಾರವನ್ನು ತಿಳಿಸುವ ಸ್ವಾತಂತ್ರ್ಯವಿದೆ ಎಂದು ತಿಳಿಸಿದರು.

ಪ್ರಸ್ತುತ ಸಿಎಂ ಅಗಿ ಸಿದ್ದರಾಮಯ್ಯ ಅವರೇ ಇದ್ದಾರೆ, ಮುಂದೆಯೂ ಅವರೇ ಮುಖ್ಯಮಂತ್ರಿಯಾಗಿ ಆಡಳಿತ ನಿರ್ವಹಿಸುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಹೈಕಮಾಂಡ್‌ ತೀರ್ಮಾನಿಸಲಿದ್ದು, ಯಾವುದೇ ಬದಲಾವಣೆಗೆ ಅವಕಾಶವಿಲ್ಲವೆಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.

ಇನ್ನೂ ಡಿನ್ನರ್‌ ಪಾರ್ಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿನ್ನರ್‌ ಪಾರ್ಟಿಯನ್ನು ಯಾರೂ ತಡೆ ಹಿಡಿದಿಲ್ಲ. ಕೇವಲ ಅದನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಕಾರಣಕ್ಕೆ ಮುಂದಿನ ದಿನಗಳಲ್ಲಿ ಹೈಕಮಾಂಡ್‌ನೊಂದಿಗೆ ಡಿನ್ನರ್‌ ಪಾರ್ಟಿ ಕುರಿತು ಚರ್ಚಿಸಿ ಆಯೋಜನೆ ಮಾಡಲಾಗುವುದು ಎಂದರು.

 

ಅರ್ಚನ ಎಸ್‌ ಎಸ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

9 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

10 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

10 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago