ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾದ ನಂತರ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿಎಲ್ ಸಂತೋಷ್ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.
ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…