ರಾಜ್ಯ

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆಯುತ್ತಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ತಮ್ಮ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಡಿಕೊಂಡ ರಾಯ್ ಅವರ ಡೈರಿ (ದಿನಚರಿ ಪುಸ್ತಕ) ಈಗ ಪೊಲೀಸರ ತನಿಖೆಯ ಪ್ರಮುಖ ಭಾಗವಾಗಿದೆ. ಡೈರಿಯಲ್ಲಿ ಅವರು ಪ್ರಭಾವಿ ಶಾಸಕರ, ಚಿತ್ರ ರಂಗದ ಗಣ್ಯರ ಹೆಸರುಗಳನ್ನು ಉಲ್ಲೇಖಿಸಿರುವುದು ಗೊತ್ತಾಗಿದೆ.

ಕಾನ್ಛಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಉದ್ಯಮ ವಲಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದ ತನಿಖೆಯಲ್ಲಿ ಈಗ ರಾಯ್ ಅವರ ವೈಯಕ್ತಿಕ ಡೈರಿ ಪೊಲೀಸರಿಗೆ ಪ್ರಮುಖ ಸುಳಿವಾಗಿ ಪರಿಣಮಿಸಿದೆ. ಇದರಲ್ಲಿ ಪ್ರಮುಖ ವಿಚಾರಗಳನ್ನು ಬರೆದಿಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಖ್ಯಾತ ಉದ್ಯಮಿ ಸಿ.ಜೆ.ರಾಯ್ ಅವರಿಗೆ ಪ್ರತಿದಿನ ಡೈರಿ ಬರೆಯುವ ಅಭ್ಯಾಸವಿತ್ತು ಎನ್ನಲಾಗಿದ್ದು, ಆ ದಿನಚರಿಯಲ್ಲಿ ಹಲವು ರಾಜಕೀಯ ಹಾಗೂ ಸಿನಿಮಾ ರಂಗದ ಗಣ್ಯರ ಕುರಿತು ಉಲ್ಲೇಖಗಳಿರುವುದಾಗಿ ಮೂಲಗಳು ತಿಳಿಸಿವೆ. ಡೈರಿಯಲ್ಲಿ ರಾಜ್ಯದ ಇಬ್ಬರು ಪ್ರಭಾವಿ ಶಾಸಕರು ಮತ್ತು ಒಬ್ಬ ಮಾಜಿ ಸಂಸದರ ಹೆಸರುಗಳು ಕಾಣಿಸಿಕೊಂಡಿರುವುದು ಪೊಲೀಸರ ಗಮನ ಸೆಳೆದಿದೆ ಎಂದು ಹೇಳಲಾಗುತ್ತಿದೆ.

ತಮ್ಮ ಕಂಪೆನಿಯ ಕಾರ್ಯಕ್ರಮಗಳಿಗೆ ಅವರನ್ನು ಕರೆಸುತ್ತಿದ್ದರು ಎಂದು ಮಾಹಿತಿ ಇದೆ. ಕೇರಳದಲ್ಲಿ ೧೬ ಪ್ರಾಜೆಕ್ಟ್‌ಗಳು ನಡೆಯುತ್ತಿದ್ದವು. ಈ ಪ್ರಾಜೆಕ್ಟ್‌ಗಳಿಗೆ ಸಂಬಂಧಿಸಿ ಹಲವು ಈವೆಂಟ್‌ಗಳನ್ನು ಆಯೋಜಿಸಿದ್ದರು. ಈ ಈವೆಂಟ್‌ಗಳಿಗೆ ನಟಿಯರು, ಮಾಡೆಲ್‌ಗಳು ಮತ್ತು ರಾಜಕಾರಣಿಗಳನ್ನು ಆಹ್ವಾನಿಸುತ್ತಿದ್ದರು. ಆದರೆ ಡೈರಿಯಲ್ಲಿ ಹೆಸರುಗಳನ್ನು ಏಕೆ ಬರೆದಿದ್ದರು? ಬರೀ ಈವೆಂಟ್ ವಿಚಾರಕ್ಕೆಯಾ ಅಥವಾ ಬೇರೆ ಕಾರಣವೇ? ಎಂಬುದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಯಾರ ಹೆಸರುಗಳು ಉಲ್ಲೇಖ?
ವಿಶೇಷವಾಗಿ ಬೆಂಗಳೂರಿನ ಒಬ್ಬ ಪ್ರಭಾವಿ ಶಾಸಕ ಮತ್ತು ಕೋಲಾರ ಜಿಲ್ಲೆಯ ಶಾಸಕರೊಂದಿಗೆ ನಡೆದಿದ್ದ ವ್ಯಾವಹಾರಿಕ ಸಂಪರ್ಕಗಳ ಕುರಿತು ವಿವರಗಳು ದಾಖಲಾಗಿವೆ ಎನ್ನಲಾಗಿದೆ. ಜೊತೆಗೆ, ದಕ್ಷಿಣ ಭಾರತದ ಖ್ಯಾತ ನಟಿ ಹಾಗೂ ಮಾಡೆಲ್‌ಗಳ ಹೆಸರುಗಳೂ ಡೈರಿಯಲ್ಲಿ ಉಲ್ಲೇಖವಾಗಿರುವ ಮಾಹಿತಿ ಲಭ್ಯವಾಗಿದೆ.

ಇದಲ್ಲದೆ, ರಾಯ್ ಅವರು ದುಬೈನಲ್ಲಿ ನಡೆಸುತ್ತಿದ್ದ ವ್ಯವಹಾರಗಳು, ಅಲ್ಲಿನ ಪ್ರಭಾವಿ ವ್ಯಕ್ತಿಗಳೊಂದಿಗೆ ಹೊಂದಿದ್ದ ಸಂಪರ್ಕಗಳ ಕುರಿತು ಕೂಡ ಡೈರಿಯಲ್ಲಿ ಬರೆಯಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಎಲ್ಲಾ ಅಂಶಗಳನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಡೈರಿಯಲ್ಲಿರುವ ಮಾಹಿತಿಯ ಆಧಾರದಲ್ಲಿ ತನಿಖೆ ಮುಂದುವರಿದಿದೆ ಎನ್ನಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago