cm ibrahim pahalgam attack
ಬೆಂಗಳೂರು: ಕಾಶ್ಮೀರ ಭಾರತದ ಅಂಗವಾಗಿದ್ದು, ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಯಾವ ಯುದ್ಧವೂ ಆಗುವುದಿಲ್ಲ. ಯುದ್ಧ ಮಾಡಲು ಇಬ್ಬರೂ ತಯಾರಿಲ್ಲ. ಒಂದು ವೇಳೆ ಯುದ್ಧವಾದರೆ ಇಬ್ಬರಿಗೂ ನಷ್ಟವಾಗಲಿದ್ದು, ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನಾವೆಲ್ಲರೂ ಭಾರತೀಯರು. ಈ ದೇಶ ಸರ್ವಧರ್ಮ ಸಮನ್ವಯದ ನಾಡು. ಇಲ್ಲಿ ಯಾಕೆ ಗೊಂದಲ ಸೃಷ್ಟಿ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:- ಪಾಕಿಸ್ತಾನ ವಿರುದ್ಧ ಯುದ್ಧ ಆಗಲೇಬೇಕು: ಸಚಿವ ಎಂ.ಬಿ.ಪಾಟೀಲ್
ಇನ್ನು ಜಾತಿ ಜನಗಣತಿ ವರದಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಾತಿ ಜನಗಣತಿ ಬಗ್ಗೆ ಯಾಕೆ ತಲೆಕೆಡಿಸಿಕೊಂಡಿದ್ದಾರೆ. ದಲಿತರಿಗೆ ಮಾತ್ರ ಮೀಸಲಾತಿ ಇದೆ. ಹಿಂದುಳಿದ, ಅಲ್ಪಸಂಖ್ಯಾತರಿಗೆ ಏನೂ ಇಲ್ಲ. ಈ ಹಿಂದೆಯೇ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಯಾಗಬೇಕಿತ್ತು. ನಾವು ಬಸವತತ್ವದವರು.ಎಲ್ಲರನ್ನು ಜೊತೆಗೆ ಕೊಂಡೊಯ್ಯುತ್ತೇವೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಬೇಕಿತ್ತು. ಹಿಂದೆ ಜನತಾದಳವಿದ್ದಾಗ ಮಂಡಲ್ ಕಮೀಷನ್ ತಂದು ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ಕೊಡಲಾಯಿತು ಎಂದು ತಿಳಿಸಿದರು.
ಎರಡು ತಿಂಗಳಲ್ಲಿ ಹೊಸ ಪಕ್ಷ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಒಳ್ಳೆಯ ಆರೋಗ್ಯ ಕೊಡಲಿ. ಅವರ ಆರೋಗ್ಯ ಹೇಗಿದೆ ಎಂದು ವಿಚಾರಿಸಿದ್ದೆ ಎಂದ ಅವರು, ಎರಡು ತಿಂಗಳಲ್ಲಿ ಹೊಸ ಪಕ್ಷ ಘೋಷಿಸುತ್ತೇವೆ. ಸಮಾನಸ್ಕರೆಲ್ಲರೂ ಸೇರಿ ಪ್ರಾದೇಶಿಕ ಪಕ್ಷ ಸ್ಥಾಪನೆಗೆ ಹೊರಟಿದ್ದೇವೆ. ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದರು. ಜೆಡಿಎಸ್ ಗೆದ್ದ ಕಡೆ ಮುಸ್ಲಿಮರ ಮತಗಳು ದೊರೆತಿವೆ. ಇನ್ನು ಮುಂದೆ ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ಕಷ್ಟ. ಜೆಡಿಎಸ್ಗೆ ಬಿಜೆಪಿ ಭಾರವಾಗಿದೆ. ಬಿಜೆಪಿಯವರಿಗೆ ಜೆಡಿಎಸ್ ಭಾರವಾಗಿದೆ ಎಂದು ಟೀಕಿಸಿದರು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…