ರಾಜ್ಯ

ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಕಾಶ್ಮೀರ ಭಾರತದ ಅಂಗವಾಗಿದ್ದು, ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಯಾವ ಯುದ್ಧವೂ ಆಗುವುದಿಲ್ಲ. ಯುದ್ಧ ಮಾಡಲು ಇಬ್ಬರೂ ತಯಾರಿಲ್ಲ. ಒಂದು ವೇಳೆ ಯುದ್ಧವಾದರೆ ಇಬ್ಬರಿಗೂ ನಷ್ಟವಾಗಲಿದ್ದು, ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನಾವೆಲ್ಲರೂ ಭಾರತೀಯರು. ಈ ದೇಶ ಸರ್ವಧರ್ಮ ಸಮನ್ವಯದ ನಾಡು. ಇಲ್ಲಿ ಯಾಕೆ ಗೊಂದಲ ಸೃಷ್ಟಿ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ:- ಪಾಕಿಸ್ತಾನ ವಿರುದ್ಧ ಯುದ್ಧ ಆಗಲೇಬೇಕು: ಸಚಿವ ಎಂ.ಬಿ.ಪಾಟೀಲ್‌

ಇನ್ನು ಜಾತಿ ಜನಗಣತಿ ವರದಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಾತಿ ಜನಗಣತಿ ಬಗ್ಗೆ ಯಾಕೆ ತಲೆಕೆಡಿಸಿಕೊಂಡಿದ್ದಾರೆ. ದಲಿತರಿಗೆ ಮಾತ್ರ ಮೀಸಲಾತಿ ಇದೆ. ಹಿಂದುಳಿದ, ಅಲ್ಪಸಂಖ್ಯಾತರಿಗೆ ಏನೂ ಇಲ್ಲ. ಈ ಹಿಂದೆಯೇ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಯಾಗಬೇಕಿತ್ತು. ನಾವು ಬಸವತತ್ವದವರು.ಎಲ್ಲರನ್ನು ಜೊತೆಗೆ ಕೊಂಡೊಯ್ಯುತ್ತೇವೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಬೇಕಿತ್ತು. ಹಿಂದೆ ಜನತಾದಳವಿದ್ದಾಗ ಮಂಡಲ್ ಕಮೀಷನ್ ತಂದು ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ಕೊಡಲಾಯಿತು ಎಂದು ತಿಳಿಸಿದರು.

ಎರಡು ತಿಂಗಳಲ್ಲಿ ಹೊಸ ಪಕ್ಷ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಒಳ್ಳೆಯ ಆರೋಗ್ಯ ಕೊಡಲಿ. ಅವರ ಆರೋಗ್ಯ ಹೇಗಿದೆ ಎಂದು ವಿಚಾರಿಸಿದ್ದೆ ಎಂದ ಅವರು, ಎರಡು ತಿಂಗಳಲ್ಲಿ ಹೊಸ ಪಕ್ಷ ಘೋಷಿಸುತ್ತೇವೆ. ಸಮಾನಸ್ಕರೆಲ್ಲರೂ ಸೇರಿ ಪ್ರಾದೇಶಿಕ ಪಕ್ಷ ಸ್ಥಾಪನೆಗೆ ಹೊರಟಿದ್ದೇವೆ. ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದರು. ಜೆಡಿಎಸ್ ಗೆದ್ದ ಕಡೆ ಮುಸ್ಲಿಮರ ಮತಗಳು ದೊರೆತಿವೆ. ಇನ್ನು ಮುಂದೆ ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ಕಷ್ಟ. ಜೆಡಿಎಸ್‍ಗೆ ಬಿಜೆಪಿ ಭಾರವಾಗಿದೆ. ಬಿಜೆಪಿಯವರಿಗೆ ಜೆಡಿಎಸ್ ಭಾರವಾಗಿದೆ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago