ರಾಜ್ಯ

ಚಳಿಗಾಲದ ಅಧಿವೇಶನ: ಕೈ ಪಕ್ಷದ ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸುವರ್ಣಸೌಧದಲ್ಲಿ ಇಂದಿನಿಂದ(ಡಿ.9) ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅನೇಕ ಆರೋಪಗಳನ್ನು ಕುರಿತು ಚರ್ಚಿಸುವ ಸಾಧ್ಯತೆ ಇದೆ. ಹೀಗಾಗಿ ವಿಪಕ್ಷಗಳಿಗೆ ಸೂಕ್ತ ಉತ್ತರ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಶಾಸಕರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಖಾಸಗಿ ಹೊಟೇಲ್‌ನಲ್ಲಿ ಕೈ ಪಕ್ಷದ ಶಾಸಕಾಂಗ ಸಭೆಯನ್ನು ನಡೆಸಲು ನಾಳೆ(ಡಿ.10) ತೀರ್ಮಾನಿಸಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕರು, ಸಂಸದರು ಹಾಗೂ ಪರಿಷತ್‌ ಸದಸ್ಯರು ಭಾಗವಹಿಸಿ ವಿರೋಧ ಪಕ್ಷಗಳಿಗೆ  ಸೂಕ್ತ ಉತ್ತರ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

17 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

32 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…

4 hours ago

ಲಿಂಗ ಸಮಾನತೆ ಬರಿ ಆದರ್ಶವಲ್ಲ , ಸಾಧಿಸಬೇಕಾದ ಗುರಿ

ಪ್ರೊ.ಆರ್.ಎಂ.ಚಿಂತಾಮಣಿ ಇತ್ತೀಚೆಗೆ ಕೇಂದ್ರ ಸರ್ಕಾರದ ಹಿರಿಯ ಕಾರ್ಯದರ್ಶಿ ದರ್ಜೆಯ ಅಧಿಕಾರಿಯೊಬ್ಬರು ಒಂದು ವಿಚಾರಸಂಕಿರಣದಲ್ಲಿ ‘೨೦೪೭ರ ಹೊತ್ತಿಗೆ ವಿಕಸಿತ ಭಾರತವಾಗಬೇಕಾದರೆ ಮಹಿಳೆಯರಲ್ಲಿ…

4 hours ago