ರಾಜ್ಯ

ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ : ಸಿಎಂ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.
ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

1 min ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

13 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

14 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

14 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

15 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

15 hours ago