ರಾಜ್ಯ

ಡಾ.ಬಿ.ಆರ್‌.ಅಂಬೇಡ್ಕರ್‌ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಸಹ ಒಬ್ಬರಾಗಿದ್ದು, ನಮ್ಮ ದೇಶಕ್ಕೆ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು(ಡಿ.6) ಆಯೋಜಿಸಲಾಗಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 68ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದಿದ್ದಾರೆ.

ಅಂಬೇಡ್ಕರ್ ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ನೀಡಿದ್ದು, ಈಗ ಅದು ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂಬ ಖ್ಯಾತಿ ಪಡೆದಿದೆ . ಅನೇಕ ಜನರು ಸಂವಿಧಾನವನ್ನು ವಿರೋಧಿಸುತ್ತಾರೆ. ಆದರೆ ನಮ್ಮ ಭಾರತ ದೇಶ ಬಹುಸಂಸ್ಕೃತಿಯ, ಬಹುತ್ವದ ದೇಶವಾಗಿದೆ. ಈ ದೇಶದಲ್ಲಿ ಹಲವು ಜಾತಿ, ಧರ್ಮಗಳು ಹಾಗೂ ಹಲವು ಭಾಷೆಗಳಿವೆ. ಹೀಗಾಗಿ ಅಂಬೇಡ್ಕರ್ ನಮ್ಮ ದೇಶಕ್ಕೆ ಪೂರಕವಾದ ಸಂವಿಧಾನವನ್ನು ನೀಡಿದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು ಎಂದು ಸಾರಿ ಮಾನವ ಧರ್ಮವನ್ನು ಪಾಲಿಸಿ, ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು ಎಂದು ಹೇಳಿದ ಮಹಾನ್‌ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಅಂದಿನ ಕಾಲದಲ್ಲಿಯೇ ಅಂಬೇಡ್ಕರ್‌ ಅವರು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ಹೇಳಿ ತಮ್ಮ ಅಂತಿಮ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರಿಸಿ ಮರಣ ಹೊಂದಿದರು. ಆದರೆ ಅವರು ನೀಡಿದ ಸಂವಿಧಾನದ ಇಂದಿಗೂ ಜೀವಂತವಾಗಿದೆ. ಅದನ್ನು ನಾವೆಲ್ಲರೂ ರಕ್ಷಿಸಿ, ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅಂತೆಯೇ ಸಂವಿಧಾನ , ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago