ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗಿರುವುದಕ್ಕೆ ನಮ್ಮ ಬಳಿ ಸಾಕ್ಷ್ಯಾಧಾರಗಳಿವೆ. ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ ಸುಮಾರು 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಹಕ್ಕು ಹಾಗೂ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ ಇರಬೇಕು. ಅದನ್ನು ಬಿಟ್ಟು ಕಾನೂನು ಅನ್ನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದರೆ ಸರ್ಕಾರ ಸಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಂಧಾನಕ್ಕಾಗಿ ಸಚಿವರನ್ನು ನೇಮಿಸಲಾಗಿತ್ತು.
ಪಂಚಮಸಾಲಿ ಹೋರಾಟಗಾರರು ಟ್ರ್ಯಾಕ್ಟರ್ ತರುವ ಮೂಲಕ ಹೋರಾಟ ಮಾಡುತ್ತೇವೆಂದು ಮುಂಚೆಯೇ ತಿಳಿಸಿದ್ದರು. ಅದಕ್ಕೆ ಕೋರ್ಟ್ ಅನುಮತಿ ನೀಡದೆ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಆದೇಶ ನೀಡಿತ್ತು. ಆದರೆ ಹೋರಾಟಗಾರರು ಕಾನೂನು ಅನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಹೀಗಾಗಿ ನಾನು ಎಲ್ಲ ಕಡೆಗೂ ಹೋಗಲು ಸಾಧ್ಯವಿಲ್ಲವೆಂದು ಅರಿತು ಈ ಹೋರಾಟವನ್ನು ತಡೆಯಲು ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂರೆ ಮೂವರು ಸಚಿವರನ್ನು ಸಂಧಾನಕ್ಕಾಗಿ ನೇಮಿಸಲಾಗಿತ್ತು. ಆದರೆ ಅವರು ನಾವು ಸಿಎಂ ಬಳಿಯೇ ಮಾತನಾಡುತ್ತೇವೆ ಎಂದಿದ್ದರು. ಈ ಬೇಡಿಕೆಯನ್ನು ನಾನು ಈಡೇರಿಸಲು ಕರೆದಾಗ ಹೋರಾಟಗಾರರು ಬರಲಿಲ್ಲ ಎಂದಿದ್ದಾರೆ.
ಅಂದಿನ ಕಾಲದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಿ 3ಎ ಒಕ್ಕಲಿಗರಿಗೆ ಶೇ.2 ಹಾಗೂ 3ಬಿ ಪ್ರವರ್ಗಗಳಲ್ಲಿರುವ ಲಿಂಗಾಯತರಿಗೆ ಶೇ.2 ರಷ್ಟು ಸಲಾತಿಯನ್ನು ಜಾರಿ ಮಾಡಿದ್ದರು. ಹಾಗಾಗಿ ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಹಾಗೂ ಇದೇ ಸ್ವಾಮೀಜಿ ಅವರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು. ಆ ವೇಳೆ ಅಂದಿನ ಅಡ್ವಕೇಟ್ ಜನರಲ್ ಹಾಗೂ ಬಿಜೆಪಿ ಸರ್ಕಾರ ಮೀಸಲಾತಿಯಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲವೆಂದು ತಿಳಿಸಿದ್ದರು ಎಂದು ಹೇಳಿದ್ದಾರೆ.
ಪಂಚಮಸಾಲಿಯವರಿಗೆ ಸಂವಿಧಾನದ ಪ್ರಕಾರವೇ ಮೀಸಲಾತಿ ನೀಡಲಾಗುವುದು
ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಡಿ ಅಡಿಯಲ್ಲಿದ್ದಾರೆ. ಅವರನ್ನು 2ಎ ಸೇರಿಸಬೇಕಾದರೆ ಸಂವಿಧಾನದ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ. ಹೀಗಾಗಿ ನಾವು ಅದರಂತೆಯೇ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…