ರಾಜ್ಯ

ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಸಮ್ಮನಿರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್‌ ತಳ್ಳಿ ಒಳಗೆ ನುಗ್ಗಿರುವುದಕ್ಕೆ ನಮ್ಮ ಬಳಿ ಸಾಕ್ಷ್ಯಾಧಾರಗಳಿವೆ. ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ ಸುಮಾರು 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಹಕ್ಕು ಹಾಗೂ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ ಇರಬೇಕು. ಅದನ್ನು ಬಿಟ್ಟು ಕಾನೂನು ಅನ್ನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದರೆ ಸರ್ಕಾರ ಸಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂಧಾನಕ್ಕಾಗಿ ಸಚಿವರನ್ನು ನೇಮಿಸಲಾಗಿತ್ತು.

ಪಂಚಮಸಾಲಿ ಹೋರಾಟಗಾರರು ಟ್ರ್ಯಾಕ್ಟರ್‌ ತರುವ ಮೂಲಕ ಹೋರಾಟ ಮಾಡುತ್ತೇವೆಂದು ಮುಂಚೆಯೇ ತಿಳಿಸಿದ್ದರು. ಅದಕ್ಕೆ ಕೋರ್ಟ್‌ ಅನುಮತಿ ನೀಡದೆ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಆದೇಶ ನೀಡಿತ್ತು. ಆದರೆ ಹೋರಾಟಗಾರರು ಕಾನೂನು ಅನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಹೀಗಾಗಿ ನಾನು ಎಲ್ಲ ಕಡೆಗೂ ಹೋಗಲು ಸಾಧ್ಯವಿಲ್ಲವೆಂದು ಅರಿತು ಈ ಹೋರಾಟವನ್ನು ತಡೆಯಲು ಸಚಿವ ಎಚ್‌.ಸಿ.ಮಹದೇವಪ್ಪ ಸೇರಿದಂರೆ ಮೂವರು ಸಚಿವರನ್ನು ಸಂಧಾನಕ್ಕಾಗಿ ನೇಮಿಸಲಾಗಿತ್ತು. ಆದರೆ ಅವರು ನಾವು ಸಿಎಂ ಬಳಿಯೇ ಮಾತನಾಡುತ್ತೇವೆ ಎಂದಿದ್ದರು. ಈ ಬೇಡಿಕೆಯನ್ನು ನಾನು ಈಡೇರಿಸಲು ಕರೆದಾಗ ಹೋರಾಟಗಾರರು ಬರಲಿಲ್ಲ ಎಂದಿದ್ದಾರೆ.

ಅಂದಿನ ಕಾಲದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಿ 3ಎ ಒಕ್ಕಲಿಗರಿಗೆ ಶೇ.2 ಹಾಗೂ 3ಬಿ ಪ್ರವರ್ಗಗಳಲ್ಲಿರುವ ಲಿಂಗಾಯತರಿಗೆ ಶೇ.2 ರಷ್ಟು ಸಲಾತಿಯನ್ನು ಜಾರಿ ಮಾಡಿದ್ದರು. ಹಾಗಾಗಿ ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್‌ ಹಾಗೂ ಇದೇ ಸ್ವಾಮೀಜಿ ಅವರು ಸುಪ್ರಿಂಕೋರ್ಟ್‌ ಮೆಟ್ಟಿಲೇರಿದ್ದರು. ಆ ವೇಳೆ ಅಂದಿನ ಅಡ್ವಕೇಟ್‌ ಜನರಲ್‌ ಹಾಗೂ ಬಿಜೆಪಿ ಸರ್ಕಾರ ಮೀಸಲಾತಿಯಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲವೆಂದು ತಿಳಿಸಿದ್ದರು ಎಂದು ಹೇಳಿದ್ದಾರೆ.

ಪಂಚಮಸಾಲಿಯವರಿಗೆ ಸಂವಿಧಾನದ ಪ್ರಕಾರವೇ ಮೀಸಲಾತಿ ನೀಡಲಾಗುವುದು

ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಡಿ ಅಡಿಯಲ್ಲಿದ್ದಾರೆ. ಅವರನ್ನು 2ಎ ಸೇರಿಸಬೇಕಾದರೆ ಸಂವಿಧಾನದ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ. ಹೀಗಾಗಿ ನಾವು ಅದರಂತೆಯೇ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

 

 

 

ಅರ್ಚನ ಎಸ್‌ ಎಸ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

3 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

5 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

6 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

6 hours ago