ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿ.9) ಅನುಭವ ಮಂಟಪ ತೈಲಚಿತ್ರ ಅನಾವರಣಗೊಳಿಸಿದರ ಬಗ್ಗೆ ಸದನ ಕಲಾಪದ ವೇಳೆ ಮಾತನಾಡಿದ ಅವರು, ಇಂದು ನನ್ನ ಕೈಯಿಂದ ಬಸವಣ್ಣನವರ ಅನುಭವ ಮಂಟಪದ ತೈಲಚಿತ್ರದ ಅನಾವರಣ ಆಗಿರುವುದು ಸಂತಸದ ಸಂಗತಿಯಾಗಿದೆ. ಬಸವಣ್ಣನವರು 12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದ್ದರು ಎಂದು ಹೇಳಿದ್ದಾರೆ.
ಬಸವಣ್ಣನವರು ಮನುಷ್ಯನಲ್ಲಿರುವ ಮೇಲು-ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ, ಮನುಷ್ಯನ ಧರ್ಮದಲ್ಲಿ ತಾರತಮ್ಮ ಆಗಲು ಸಾಧ್ಯವಿಲ್ಲ. ಆದರೆ ವ್ಯಕ್ತಿಯ ಯೋಗ್ಯತೆಯನ್ನು ಜಾತಿ, ವರ್ಣ ವ್ಯವಸ್ಥೆಯ ಆಧಾರದ ಮೇಲೆ ಜಾತಿಯನ್ನು ನಿರ್ಧರಿಸಲಾಗುತ್ತಿತ್ತು. ಹೀಗಾಗಿ ಅವರು ಅವಿದ್ಯಾವಂತರಿಗೂ ಅರ್ಥವಾಗುವಂತೆ ತಮ್ಮ ವಚನದಲ್ಲಿ ದಯೆಯೇ ಧರ್ಮದ ಮೂಲ ಎಂದು ಧರ್ಮವನ್ನು ಭೋದಿಸಿದರು ಎಂದಿದ್ದಾರೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…