ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿ.9) ಅನುಭವ ಮಂಟಪ ತೈಲಚಿತ್ರ ಅನಾವರಣಗೊಳಿಸಿದರ ಬಗ್ಗೆ ಸದನ ಕಲಾಪದ ವೇಳೆ ಮಾತನಾಡಿದ ಅವರು, ಇಂದು ನನ್ನ ಕೈಯಿಂದ ಬಸವಣ್ಣನವರ ಅನುಭವ ಮಂಟಪದ ತೈಲಚಿತ್ರದ ಅನಾವರಣ ಆಗಿರುವುದು ಸಂತಸದ ಸಂಗತಿಯಾಗಿದೆ. ಬಸವಣ್ಣನವರು 12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದ್ದರು ಎಂದು ಹೇಳಿದ್ದಾರೆ.
ಬಸವಣ್ಣನವರು ಮನುಷ್ಯನಲ್ಲಿರುವ ಮೇಲು-ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ, ಮನುಷ್ಯನ ಧರ್ಮದಲ್ಲಿ ತಾರತಮ್ಮ ಆಗಲು ಸಾಧ್ಯವಿಲ್ಲ. ಆದರೆ ವ್ಯಕ್ತಿಯ ಯೋಗ್ಯತೆಯನ್ನು ಜಾತಿ, ವರ್ಣ ವ್ಯವಸ್ಥೆಯ ಆಧಾರದ ಮೇಲೆ ಜಾತಿಯನ್ನು ನಿರ್ಧರಿಸಲಾಗುತ್ತಿತ್ತು. ಹೀಗಾಗಿ ಅವರು ಅವಿದ್ಯಾವಂತರಿಗೂ ಅರ್ಥವಾಗುವಂತೆ ತಮ್ಮ ವಚನದಲ್ಲಿ ದಯೆಯೇ ಧರ್ಮದ ಮೂಲ ಎಂದು ಧರ್ಮವನ್ನು ಭೋದಿಸಿದರು ಎಂದಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…