ರಾಜ್ಯ

ವಿನಯ್‌ ಆತ್ಮಹತ್ಯೆ ಪ್ರಕರಣ| ರಾಜ್ಯ ಸರ್ಕಾರ, ಪೊಲೀಸರಿಗೆ ನೈತಿಕತೆ ಇದೆಯಾ?: ಸಿ.ಎನ್‌.ಅಶ್ವಥ್‌ ನಾರಾಯಣ

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ದೂರು ದಾಖಲಿಸಿ, ಅವರನ್ನು ಬಂಧಿಸಬೇಕು. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಹೆಸರನ್ನೇ ದಾಖಲಿಸಿಲ್ಲ ಎಂದು ಬಿಜೆಪಿ ಶಾಸಕ ಡಾ. ಸಿ.ಎನ್‌.ಅಶ್ವಥ್‌ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಒಂದೂವರೆ ತಿಂಗಳಿನಿಂದ ಶಾಸಕರ ಹಿಂಬಾಲಕರು ಕಿರುಕುಳ ನೀಡಿದ್ದಾರೆ. ವಿನಯ್‌ ಏನು ತಪ್ಪು ಮಾಡಿದರೆಂದು ಕಿರುಕುಳ ಕೊಟ್ಟಿದ್ದಾರೆ. ಹಾಗಾಗಿ ನಮ್ಮ ಸಾವಿಗೆ ನ್ಯಾಯ ಕೊಡಿಸಿ ಎಂದು ವಿನಯ್‌ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಅಲ್ಲದೇ ಮೃತರ ಸಹೋದರ ಜೀವನ್‌ ಎಂಬಾತ ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಿದರೂ ಸಹ ಶಾಸಕರ ಹೆಸರನ್ನೇ ಎಫ್‌ಐಆರ್‌ ದಾಖಲಿಸಿಲ್ಲ. ಈ ಕಾರಣಕ್ಕೆ ಸರ್ಕಾರ ಮತ್ತು ಪೊಲೀಸರಿಗೆ ನೈತಿಕತೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು,
ಈ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಯಂತೂ ಮರಿಚಿಕೆಯಾಗಿದೆ, ಅಭಿವೃದ್ಧಿ ವಿಷಯದ ಬಗ್ಗೆ ಮಾತಾಡಿದ್ರೆ ಅವರುಗಳ ಮೇಲೆ ರಾಜಕೀಯ ದ್ವೇಷದಿಂದ ದೂರುಗಳು ದಾಖಲಿಸುವುದು , ಬೆದರಿಕೆಯೊಡ್ಡುವುದು ಸಾಮನ್ಯವಾಗಿದೆ ಇದರಿಂದ ಇನ್ನೇಷ್ಟು ಅಮಾಯಕರ ಜೀವ ಪಡಿಯುತ್ತೀರಿ ಸಿದ್ದರಾಮಯ್ಯನವರೇ, ಈ ಕೂಡಲೇ ದೂರನ್ನು ದಾಖಲಿಸಿ ಸಾವಿಗೆ ಕಾರಣಕರ್ತರಾದರವರನ್ನು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಆಗ್ರಹಿಸಿದ್ದಾರೆ.

ಈ ದ್ವೇಷದ ರಾಜಕಾರಣಕ್ಕೆ ಬಲಿಯಾದ ನಮ್ಮ ಕೊಡಗಿನ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

20 mins ago

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

31 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

34 mins ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

55 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

59 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

1 hour ago