ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜಕಾರಣದಲ್ಲಿ ಏನೂ ಬೇಕಾದರೂ ಆಗುತ್ತದೆ. ಹೀಗಾಗಿ ಈ ವಿಷಯ ರಾಜಕೀಯ ಸಾಧ್ಯತೆಯ ಕಲೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಯೋಗೇಶ್ವರ್ ಜೊತೆಗೆ ಕುಳಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಯೋಗೇಶ್ವರ್ ಪಕ್ಷಕ್ಕೆ ಸೇರಿಕೊಳ್ಳಲು ಯಾವುದೇ ಷರತ್ತು ಹಾಕಿಲ್ಲ. ಇಂದು ಬೆಳಿಗ್ಗೆ 8 ಗಂಟೆಗೆ ನನ್ನನ್ನು ಭೇಟಿ ಮಾಡಿದರು. ಬಳಿಕ, ಸಾಕಷ್ಟು ವಿಚಾರ ಚರ್ಚೆ ಮಾಡಿದ ಮೇಲೆ ನಾನು ಕಾಂಗ್ರೆಸ್ನಲ್ಲಿ ಇರಬೇಕೆಂದು ತೀರ್ಮಾನಿಸಿದ್ದೇನೆ ಎಂದರು. ಈ ವಿಚಾರವನ್ನು ನಾನು ತಕ್ಷಣವೇ ಸಿಎಂ ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ಗಮನಕ್ಕೆ ತಂದೆ. ಅವರೆಲ್ಲರೂ ಒಪ್ಪಿಗೆ ಸೂಚಿಸಿದ ನಂತರ ಯೋಗೇಶ್ವರ್ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಯಿತು ಎಂದರು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…