ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದೇ ಗುರುವಾರ ಅಥವಾ ಶುಕ್ರವಾರ ನಾಮಪತ್ರ ಸಲ್ಲಿಸಲು ಯೋಗೇಶ್ವರ್ ಅವರು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಮಪತ್ರ ಸಲ್ಲಿಸಲು ಎರಡು ಸೆಟ್ ಅಫಿಡವಿಟ್ ಸಿದ್ಧ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಯೋಗೇಶ್ವರ್ ನಡೆಗೆ ಎನ್ಡಿಎ ನಾಯಕರೇ ಕಂಗಾಲಾಗಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮಾತಾಗಿದೆ.
ಯೋಗೇಶ್ವರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಅಫಿಡವಿಟ್ ಸಿದ್ಧಪಡಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡಿದ್ದಾರೆ.
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…
ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…
ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ…
ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ…