Mysore
33
clear sky

Social Media

ಬುಧವಾರ, 15 ಏಪ್ರಿಲ 2026
Light
Dark

ಸತತ 2ನೇ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್‌.ಷಡಾಕ್ಷರಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ ಸಿ.ಎಸ್‌.ಷಡಕ್ಷರಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಗರದ ಕಬ್ಬನ್‌ ಉದ್ಯಾನದಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ಇಂದು(ಡಿಸೆಂಬರ್‌.27) ಬೆಳಿ

ಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಮತದಾನ ನಡೆದಿದ್ದು ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಅವರು ನೇಮಕಗೊಂಡಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಂಘದ 971 ಪ್ರತಿನಿಧಿಗಳು, ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತ ಚಲಾವಣೆಗೆ ಹಕ್ಕು ಹೊಂದಿದ್ದು, ಮತದಾನವನ್ನು ಮಾಡಿದ್ದರು.

ಇಂದು ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆಯ ಮತದಾನದಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಹಾಗೂ ಮಾಜಿ ಅಧ್ಯಕ್ಷ ಬಿ.ಪಿ.ಮಂಜೇಗೌಡ ಅವರ ಸೋದರ ಬಿ.ಪಿ.ಕೃಷ್ಣೇಗೌಡರ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು.

ಚುನಾವಣಾ ಫಲಿತಾಂಶದ ಬಂದ ಬಳಿಕ ಸಿ.ಎಸ್‌.ಷಡಾಕ್ಷರಿ 507 ಮತಗಳನ್ನು ಪಡೆದುಕೊಂಡರೆ, ಬಿ.ಪಿ.ಕೃಷ್ಣೇಗೌಡ ಅವರು 442 ಮತಗಳನ್ನು ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷ ಷಡಕ್ಷರಿ ಅವರೇ ಈ ಬಾರಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

Tags:
error: Content is protected !!