ರಾಜ್ಯ

ಸತತ 2ನೇ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್‌.ಷಡಾಕ್ಷರಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ ಸಿ.ಎಸ್‌.ಷಡಕ್ಷರಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಗರದ ಕಬ್ಬನ್‌ ಉದ್ಯಾನದಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ಇಂದು(ಡಿಸೆಂಬರ್‌.27) ಬೆಳಿ

ಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಮತದಾನ ನಡೆದಿದ್ದು ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಅವರು ನೇಮಕಗೊಂಡಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಂಘದ 971 ಪ್ರತಿನಿಧಿಗಳು, ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತ ಚಲಾವಣೆಗೆ ಹಕ್ಕು ಹೊಂದಿದ್ದು, ಮತದಾನವನ್ನು ಮಾಡಿದ್ದರು.

ಇಂದು ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆಯ ಮತದಾನದಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಹಾಗೂ ಮಾಜಿ ಅಧ್ಯಕ್ಷ ಬಿ.ಪಿ.ಮಂಜೇಗೌಡ ಅವರ ಸೋದರ ಬಿ.ಪಿ.ಕೃಷ್ಣೇಗೌಡರ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು.

ಚುನಾವಣಾ ಫಲಿತಾಂಶದ ಬಂದ ಬಳಿಕ ಸಿ.ಎಸ್‌.ಷಡಾಕ್ಷರಿ 507 ಮತಗಳನ್ನು ಪಡೆದುಕೊಂಡರೆ, ಬಿ.ಪಿ.ಕೃಷ್ಣೇಗೌಡ ಅವರು 442 ಮತಗಳನ್ನು ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷ ಷಡಕ್ಷರಿ ಅವರೇ ಈ ಬಾರಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

9 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

15 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

19 mins ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

23 mins ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

28 mins ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

34 mins ago