ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ ಸಿ.ಎಸ್.ಷಡಕ್ಷರಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಗರದ ಕಬ್ಬನ್ ಉದ್ಯಾನದಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ಇಂದು(ಡಿಸೆಂಬರ್.27) ಬೆಳಿ
ಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಮತದಾನ ನಡೆದಿದ್ದು ಅಧ್ಯಕ್ಷರಾಗಿ ಸಿ.ಎಸ್.ಷಡಾಕ್ಷರಿ ಅವರು ನೇಮಕಗೊಂಡಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಂಘದ 971 ಪ್ರತಿನಿಧಿಗಳು, ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತ ಚಲಾವಣೆಗೆ ಹಕ್ಕು ಹೊಂದಿದ್ದು, ಮತದಾನವನ್ನು ಮಾಡಿದ್ದರು.
ಇಂದು ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆಯ ಮತದಾನದಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹಾಗೂ ಮಾಜಿ ಅಧ್ಯಕ್ಷ ಬಿ.ಪಿ.ಮಂಜೇಗೌಡ ಅವರ ಸೋದರ ಬಿ.ಪಿ.ಕೃಷ್ಣೇಗೌಡರ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು.
ಚುನಾವಣಾ ಫಲಿತಾಂಶದ ಬಂದ ಬಳಿಕ ಸಿ.ಎಸ್.ಷಡಾಕ್ಷರಿ 507 ಮತಗಳನ್ನು ಪಡೆದುಕೊಂಡರೆ, ಬಿ.ಪಿ.ಕೃಷ್ಣೇಗೌಡ ಅವರು 442 ಮತಗಳನ್ನು ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷ ಷಡಕ್ಷರಿ ಅವರೇ ಈ ಬಾರಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…